ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Last Updated 3 ಜುಲೈ 2021, 2:20 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ಶಾ.ಬಾಲೂರಾವ್‌ ಯುವ ಬರಹಗಾರ ಪ್ರಶಸ್ತಿ’ ಹಾಗೂ ‘ಶಾ.ಬಾಲೂರಾವ್ ಅನುವಾದ ಪ್ರಶಸ್ತಿ’ಗೆ ಲೇಖಕರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

ಪ್ರಶಸ್ತಿಗಳು ತಲಾ ₹25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿವೆ.

ಯುವ ಬರಹಗಾರ ಪ್ರಶಸ್ತಿಗೆ 35 ವರ್ಷದೊಳಗಿನವರು ರಚಿಸಿರುವ ಸಾಹಿತ್ಯದ ಯಾವುದೇ ಪ್ರಕಾರದ ಪುಸ್ತಕಗಳು ಹಾಗೂ ಅನುವಾದ ಪ್ರಶಸ್ತಿಗೆ ಬೇರೆ ಭಾಷೆಗಳಿಂದ ಕನ್ನಡಕ್ಕೆ ಅನುವಾದಗೊಂಡಿರುವ ಪುಸ್ತಕಗಳನ್ನು ಸಲ್ಲಿಸಬಹುದು.

ಆಸಕ್ತರು ಪುಸ್ತಕದ ಮೂರು ಪ್ರತಿಗಳು ಹಾಗೂ ಸ್ವವಿವರಗಳನ್ನು ಜುಲೈ 26ರೊಳಗೆಪ್ರತಿಷ್ಠಾನದ ವಿಳಾಸಕ್ಕೆ ತಲುಪಿಸುವಂತೆ ಪ್ರಕಟಣೆ ತಿಳಿಸಿದೆ.

ವಿಳಾಸ:ಗೌರವ ಕಾರ್ಯದರ್ಶಿ, ಬಿಎಂಶ್ರೀ ಪ್ರತಿಷ್ಠಾನ, ಎನ್‌.ಆರ್.ಕಾಲೊನಿ, ಬೆಂಗಳೂರು

ಸಂಪರ್ಕ:080–26615877

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT