ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅತೀ ಹೆಚ್ಚು 20 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಬಳ್ಳಾರಿ, ದೇವನಹಳ್ಳಿ ಕ್ಷೇತ್ರಗಳಿಗೆ ತಲಾ 17 ಅರ್ಜಿಗಳು ಸಲ್ಲಿಕೆ ಆಗಿವೆ. ಆದರೆ, ಅರಸೀಕೆರೆ ಕ್ಷೇತ್ರಕ್ಕೆ ಕೇವಲ ಒಂದು ಅರ್ಜಿ ಮಾತ್ರ ಸಲ್ಲಿಕೆ ಆಗಿದೆ. ಅಲ್ಲಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೋವರ್ಧನ್ ಮಾತ್ರ ಆಕಾಂಕ್ಷಿ. ಅರ್ಜಿ ಸಲ್ಲಿಸಿದವರಲ್ಲಿ ನಿವೃತ್ತ ನ್ಯಾಯಾಧೀಶರು, ನಿವೃತ್ತ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು, ವಕೀಲರು, ಉದ್ದಿಮೆದಾರರು, ಕಲಾವಿದರು, ವ್ಯಾಪಾರಿಗಳು ಇದ್ದಾರೆ.