<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು (ಕೆಎಸ್<br />ಸಿಎಸ್ಟಿ) 2020 ಮತ್ತು 2021ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳಿಗಾಗಿ ವಿಜ್ಞಾನಿಗಳು ಮತ್ತು ಎಂಜಿನಿಯರ್ಗಳಿಂದ ಅರ್ಜಿ ಆಹ್ವಾನಿಸಿದೆ.</p>.<p>ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಇಬ್ಬರು ಸಾಧಕರಿಗೆ ನೀಡುವ ‘ಸರ್.ಎಂ.ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿ’ಯುತಲಾ ₹2 ಲಕ್ಷ ನಗದು, ನೆನಪಿನ ಕಾಣಿಕೆ ಒಳಗೊಂಡಿದೆ. ವಿಜ್ಞಾನಿ<br />ಗಳು ಮತ್ತು ಎಂಜಿನಿಯರ್ಗಳಿಗೆ ಈ ಪ್ರಶಸ್ತಿ ನೀಡಲಾಗುವುದು.</p>.<p>₹1.50 ಲಕ್ಷ ನಗದು ಒಳಗೊಂಡಿರುವ‘ರಾಜಾ ರಾಮಣ್ಣ ಪ್ರಶಸ್ತಿ’ಯನ್ನು ಇಬ್ಬರಿಗೆ ನೀಡಲಾಗುವುದು.</p>.<p>ಐದು ಮಂದಿ ವಿಜ್ಞಾನಿಗಳಿಗೆ ‘ಸರ್.ಸಿ.ವಿ.ರಾಮನ್ ವಿಜ್ಞಾನಿ ಪ್ರಶಸ್ತಿ’, ನಾಲ್ಕು ಎಂಜಿನಿಯರ್ಗಳಿಗೆ ‘ಸತೀಶ್ ಧವನ್ ಎಂಜಿನಿಯರ್ ಪ್ರಶಸ್ತಿ’, ಇಬ್ಬರು ಮಹಿಳಾ ಸಾಧಕರಿಗೆ ‘ಕಲ್ಪನಾ ಚಾವ್ಲಾ ಮಹಿಳಾ ವಿಜ್ಞಾನಿ ಅಥವಾ ಎಂಜಿನಿಯರ್ ಪ್ರಶಸ್ತಿ’ಗಳನ್ನು ನೀಡಲಾಗುವುದು. ಈ ಮೂರೂ ಪ್ರಶಸ್ತಿಗಳು ತಲಾ ₹1 ಲಕ್ಷ ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿಪತ್ರ ಒಳಗೊಂಡಿವೆ.</p>.<p>ಆಸಕ್ತರು ಪ್ರಶಸ್ತಿಗಳಿಗೆ ನಾಮಪತ್ರ ಸಲ್ಲಿಸಲು ಮೇ 17 ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ಮಂಡಳಿಯ ವೆಬ್ಸೈಟ್ www.kscst.org.in ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.</p>.<p class="Subhead">ವಿಳಾಸ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಆವರಣ, ಬೆಂಗಳೂರು.</p>.<p class="Subhead">ಸಂಪರ್ಕ:080–23341652</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು (ಕೆಎಸ್<br />ಸಿಎಸ್ಟಿ) 2020 ಮತ್ತು 2021ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳಿಗಾಗಿ ವಿಜ್ಞಾನಿಗಳು ಮತ್ತು ಎಂಜಿನಿಯರ್ಗಳಿಂದ ಅರ್ಜಿ ಆಹ್ವಾನಿಸಿದೆ.</p>.<p>ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಇಬ್ಬರು ಸಾಧಕರಿಗೆ ನೀಡುವ ‘ಸರ್.ಎಂ.ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿ’ಯುತಲಾ ₹2 ಲಕ್ಷ ನಗದು, ನೆನಪಿನ ಕಾಣಿಕೆ ಒಳಗೊಂಡಿದೆ. ವಿಜ್ಞಾನಿ<br />ಗಳು ಮತ್ತು ಎಂಜಿನಿಯರ್ಗಳಿಗೆ ಈ ಪ್ರಶಸ್ತಿ ನೀಡಲಾಗುವುದು.</p>.<p>₹1.50 ಲಕ್ಷ ನಗದು ಒಳಗೊಂಡಿರುವ‘ರಾಜಾ ರಾಮಣ್ಣ ಪ್ರಶಸ್ತಿ’ಯನ್ನು ಇಬ್ಬರಿಗೆ ನೀಡಲಾಗುವುದು.</p>.<p>ಐದು ಮಂದಿ ವಿಜ್ಞಾನಿಗಳಿಗೆ ‘ಸರ್.ಸಿ.ವಿ.ರಾಮನ್ ವಿಜ್ಞಾನಿ ಪ್ರಶಸ್ತಿ’, ನಾಲ್ಕು ಎಂಜಿನಿಯರ್ಗಳಿಗೆ ‘ಸತೀಶ್ ಧವನ್ ಎಂಜಿನಿಯರ್ ಪ್ರಶಸ್ತಿ’, ಇಬ್ಬರು ಮಹಿಳಾ ಸಾಧಕರಿಗೆ ‘ಕಲ್ಪನಾ ಚಾವ್ಲಾ ಮಹಿಳಾ ವಿಜ್ಞಾನಿ ಅಥವಾ ಎಂಜಿನಿಯರ್ ಪ್ರಶಸ್ತಿ’ಗಳನ್ನು ನೀಡಲಾಗುವುದು. ಈ ಮೂರೂ ಪ್ರಶಸ್ತಿಗಳು ತಲಾ ₹1 ಲಕ್ಷ ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿಪತ್ರ ಒಳಗೊಂಡಿವೆ.</p>.<p>ಆಸಕ್ತರು ಪ್ರಶಸ್ತಿಗಳಿಗೆ ನಾಮಪತ್ರ ಸಲ್ಲಿಸಲು ಮೇ 17 ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ಮಂಡಳಿಯ ವೆಬ್ಸೈಟ್ www.kscst.org.in ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.</p>.<p class="Subhead">ವಿಳಾಸ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಆವರಣ, ಬೆಂಗಳೂರು.</p>.<p class="Subhead">ಸಂಪರ್ಕ:080–23341652</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>