ಈ ಸಂಬಂಧ ಸಮಿತಿ ಫೆ.14ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದೆ. ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚೇತನ್ ಅವರು ಸಮಾನತೆಯ ಹರಿಕಾರರಾಗಿದ್ದಾರೆ. ಅವರಿಗೆ ಇತ್ತೀಚಿನ ದಿನಗಳಲ್ಲಿ ಬೆದರಿಕೆ ಕರೆಗಳು ಜಾಸ್ತಿಯಾಗುತ್ತಿವೆ. ಆದ್ದರಿಂದ ಅವರಿಗೆ ಅಂಗರಕ್ಷಕರನ್ನು ನೇಮಕ ಮಾಡಬೇಕು. ಫೆ.14ರೊಳಗೆ ಬೇಡಿಕೆ ಈಡೇರಿಸದಿದ್ದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.