ಬ್ಯಾಂಕ್ ಹಗರಣದ ಬಗ್ಗೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ರಾಜ್ಯ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ಆರ್ಬಿಐಗೆ ಇದೆ. ಆಡಳಿತಾಧಿಕಾರಿಗೆ ಬ್ಯಾಂಕ್ ವಹಿವಾಟಿನ ಬಗ್ಗೆ ಜ್ಞಾನ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ಹೇಳಿತು.