ಸಂಸ್ಥೆಯಲ್ಲಿ ಒದಗಿಸುತ್ತಿರುವ ಸೇವೆಗಳಿಗೆ ರೋಗಿಗಳಿಂದ ಹಚ್ಚಿನ ಶುಲ್ಕವನ್ನು ಪಡೆಯುತ್ತಿರುವುದು, ಅನುದಾನದ ದುರ್ಬಳಕೆ, ಭ್ರಷ್ಟಾಚಾರ, ಸಂಸ್ಥೆಯ ಸಿಬ್ಬಂದಿ ಖಾಸಗಿ ಸಂಸ್ಥೆಗಳೊಂದಿಗೆ ಕೈಜೋಡಿಸಿ ಸಂಸ್ಥೆಗೆ ಆರ್ಥಿಕ ನಷ್ಟ ಉಂಟು ಮಾಡುತ್ತಿರುವುದು, ರೋಗಿಗಳಿಗೆ ಕಳಪೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿರುವುದು, ಔಷಧಗಳ ಕೊರತೆ, ನಿಗದಿತ ಸಂಸ್ಥೆಗೆ ಹೆಚ್ಚಿನ ಲಾಭ ಬರುವಂತೆ ಟೆಂಡರ್ ನೀಡಿರುವುದು ಹಾಗೂ ಔಷಧಗಳ ಖರೀದಿಯಲ್ಲಿ ಪಾರದರ್ಶಕತೆ ಇಲ್ಲದಿರುವುದರ ಬಗ್ಗೆ ಸಂಸ್ಥೆಯಲ್ಲಿನ ವೈದ್ಯರು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಾಲ್ಕು ಪುಟಗಳ ವರದಿ ಸಹಿತ ದೂರು ನೀಡಿ, ತನಿಖೆ ನಡೆಸುವಂತೆ ಒತ್ತಾಯಿಸಿದ್ದರು.