ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ ರಸಾಯನ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಪ್ರೊ.ಎಲ್. ಗೋಮತಿ ದೇವಿ, ರಾಯಚೂರು ಕ್ಲಸ್ಟರ್ ವಿಶ್ವವಿದ್ಯಾಲಯಕ್ಕೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಹರೀಶ್ ರಾಮಸ್ವಾಮಿ, ಬೆಂಗಳೂರು ನೃಪತುಂಗ ಕ್ಲಸ್ಟರ್ ವಿಶ್ವ ವಿದ್ಯಾಲಯಕ್ಕೆ ಬಾಗಲಕೋಟೆ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಶ್ರೀನಿವಾಸ್ ಎಸ್. ಬಾಲಿ, ಮಂಡ್ಯ ಕ್ಲಸ್ಟರ್ ವಿಶ್ವ ವಿದ್ಯಾಲಯಕ್ಕೆ ಎಸ್ಜೆಬಿ ತಾಂತ್ರಿಕ ಸಂಸ್ಥೆಯ ಪ್ರಾಂಶುಪಾಲ ಡಾ.ಪುಟ್ಟರಾಜು ಅವರನ್ನು ಕುಲಪತಿ ಹುದ್ದೆಗೆ ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.