<p><strong>ಬೆಂಗಳೂರು</strong>: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಭೇಟಿ ನೀಡುವವರಿಗೆ ಇನ್ಮುಂದೆ ವಿಶೇಷ ಆಕರ್ಷಣೆಯೊಂದು ಸ್ವಾಗತ ಕೋರಲಿದೆ.</p>.<p>ರೈಲುಗಳಿಗಾಗಿ ಕಾಯುವ ಪ್ರಯಾಣಿಕರನ್ನು ಆಕರ್ಷಿಸುವ ಉದ್ದೇಶದಿಂದ ನಿಲ್ದಾಣದಲ್ಲಿ ಅಮೆಜಾನ್ ನದಿ ಕಲ್ಪನೆಯಡಿ 12 ಅಡಿ ಉದ್ದದ ಸುರಂಗವನ್ನು ನಿರ್ಮಿಸಲಾಗಿದೆ. ಈ ಸುರಂಗದೊಳಗೆ ಮತ್ಸ್ಯಾಗಾರ (ಅಕ್ವೇರಿಯಂ) ರೂಪಿಸಲಾಗಿದೆ. ಸುರಂಗದೊಳಗೆ ಸಾಗುತ್ತಿದ್ದರೆ, ಅಮೆಜಾನ್ ನದಿಯೊಳಗೆ ಸಾಗುತ್ತಿರುವ ಮೀನುಗಳನ್ನು ಪ್ರತ್ಯಕ್ಷ ನೋಡುತ್ತಿರುವಂತೆ ಭಾಸವಾಗುತ್ತದೆ. ಸಾಗರದಲ್ಲಿ ಕಾಣಸಿಗುವ ಮತ್ಸ್ಯಪ್ರಭೇದಗಳು, ಸಮುದ್ರಜೀವಿಗಳ ಮಾದರಿಗಳು ಇಲ್ಲಿ ಇವೆ. ಈ ಸುರಂಗ ಪ್ರವೇಶಕ್ಕೆ ₹25 ಶುಲ್ಕ ನಿಗದಿ ಮಾಡಲಾಗಿದೆ.</p>.<p>ಭಾರತೀಯ ರೈಲ್ವೆ ನಿಲ್ದಾಣ ಅಭಿವೃದ್ಧಿ ನಿಗಮವು (ಐಆರ್ಎಸ್ಡಿಸಿ) ₹1.2 ಕೋಟಿ ವೆಚ್ಚದಲ್ಲಿ ಈ ಸುರಂಗವನ್ನು ನಿರ್ಮಿಸಿದೆ.</p>.<p>‘ಕೋವಿಡ್ ಇರುವುದರಿಂದ ಸದ್ಯ ಈ ಸುರಂಗದಲ್ಲಿ ಒಂದು ಬಾರಿಗೆ 25 ಜನರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗುತ್ತಿದೆ. ಜನರು ರೈಲಿಗಾಗಿ ಕಾಯುವ ಸಮಯವನ್ನೂ ಸಂತಸದಿಂದ ಕಳೆಯಬೇಕು ಎಂಬ ಉದ್ದೇಶ ನಮ್ಮದು’ ಎಂದು ಐಆರ್ಎಸ್ಡಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಕೆ. ಲೋಹಿಯಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಭೇಟಿ ನೀಡುವವರಿಗೆ ಇನ್ಮುಂದೆ ವಿಶೇಷ ಆಕರ್ಷಣೆಯೊಂದು ಸ್ವಾಗತ ಕೋರಲಿದೆ.</p>.<p>ರೈಲುಗಳಿಗಾಗಿ ಕಾಯುವ ಪ್ರಯಾಣಿಕರನ್ನು ಆಕರ್ಷಿಸುವ ಉದ್ದೇಶದಿಂದ ನಿಲ್ದಾಣದಲ್ಲಿ ಅಮೆಜಾನ್ ನದಿ ಕಲ್ಪನೆಯಡಿ 12 ಅಡಿ ಉದ್ದದ ಸುರಂಗವನ್ನು ನಿರ್ಮಿಸಲಾಗಿದೆ. ಈ ಸುರಂಗದೊಳಗೆ ಮತ್ಸ್ಯಾಗಾರ (ಅಕ್ವೇರಿಯಂ) ರೂಪಿಸಲಾಗಿದೆ. ಸುರಂಗದೊಳಗೆ ಸಾಗುತ್ತಿದ್ದರೆ, ಅಮೆಜಾನ್ ನದಿಯೊಳಗೆ ಸಾಗುತ್ತಿರುವ ಮೀನುಗಳನ್ನು ಪ್ರತ್ಯಕ್ಷ ನೋಡುತ್ತಿರುವಂತೆ ಭಾಸವಾಗುತ್ತದೆ. ಸಾಗರದಲ್ಲಿ ಕಾಣಸಿಗುವ ಮತ್ಸ್ಯಪ್ರಭೇದಗಳು, ಸಮುದ್ರಜೀವಿಗಳ ಮಾದರಿಗಳು ಇಲ್ಲಿ ಇವೆ. ಈ ಸುರಂಗ ಪ್ರವೇಶಕ್ಕೆ ₹25 ಶುಲ್ಕ ನಿಗದಿ ಮಾಡಲಾಗಿದೆ.</p>.<p>ಭಾರತೀಯ ರೈಲ್ವೆ ನಿಲ್ದಾಣ ಅಭಿವೃದ್ಧಿ ನಿಗಮವು (ಐಆರ್ಎಸ್ಡಿಸಿ) ₹1.2 ಕೋಟಿ ವೆಚ್ಚದಲ್ಲಿ ಈ ಸುರಂಗವನ್ನು ನಿರ್ಮಿಸಿದೆ.</p>.<p>‘ಕೋವಿಡ್ ಇರುವುದರಿಂದ ಸದ್ಯ ಈ ಸುರಂಗದಲ್ಲಿ ಒಂದು ಬಾರಿಗೆ 25 ಜನರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗುತ್ತಿದೆ. ಜನರು ರೈಲಿಗಾಗಿ ಕಾಯುವ ಸಮಯವನ್ನೂ ಸಂತಸದಿಂದ ಕಳೆಯಬೇಕು ಎಂಬ ಉದ್ದೇಶ ನಮ್ಮದು’ ಎಂದು ಐಆರ್ಎಸ್ಡಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಕೆ. ಲೋಹಿಯಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>