<p><strong>ಬೆಂಗಳೂರು:</strong> ಹಳೆಗನ್ನಡ ಸಾಹಿತ್ಯವನ್ನು ಡಿಜಿಟಲೀಕರಣಗೊಳಿಸುವ ಅಭಿಜಾತ ಕನ್ನಡ ಸಾಹಿತ್ಯ ಕಲ್ಯಾಣ ಯೋಜನೆಗೆ ಬಜೆಟ್ನಲ್ಲಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕೋರಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.</p>.<p>ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ ಬರಹಗಾರರ 58 ಚೊಚ್ಚಲ ಕೃತಿಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘2 ಸಾವಿರ ವರ್ಷಗಳಷ್ಟು ಹಳೆಯದಾದ ಕನ್ನಡ ಸಾಹಿತ್ಯವನ್ನು ಸಂರಕ್ಷಣೆ ಮಾಡುವ ಅಗತ್ಯವಿದೆ. ಅದನ್ನು ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡಿಸಲಾಗಿದೆ. ಅನುದಾನ ನೀಡಲು ಅವರೂ ಒಪ್ಪಿದ್ದಾರೆ’ ಎಂದು ಹೇಳಿದರು.</p>.<p>‘ಪುಸ್ತಕ ಪ್ರಕಟಣೆಗೆ 144 ಕೃತಿಗಳು ಬಂದಿದ್ದವು. ಪರಿಶೀಲನಾ ಸಮಿತಿಯು ಅವುಗಳಲ್ಲಿ 58 ಕೃತಿಗಳನ್ನು ಆಯ್ಕೆ ಮಾಡಿದೆ. ಲಭ್ಯ ಇರುವ ಅನುದಾನಕ್ಕೆ ಸೀಮಿತವಾಗಿ ಪುಸ್ತಕ ಪ್ರಕಟಿಸಲಾಗಿದೆ. ಈ ಕಾರ್ಯಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆಯಿಂದಲೂ ಅನುದಾನ ನೀಡುವಂತೆ ಸಮಾಜ ಕಲ್ಯಾಣ ಸಚಿವರಲ್ಲಿ ಕೋರುತ್ತೇವೆ’ ಎಂದು ಹೇಳಿದರು.</p>.<p>ಯುವ ಸಮೂಹ ಡಿಜಿಟಲ್ ಮಾಧ್ಯಮವನ್ನು ಹೆಚ್ಚಾಗಿ ಅವಲಂಬಿಸುತ್ತಿದೆ. ಹೀಗಾಗಿ, ಪುಸ್ತಕಗಳನ್ನು ಡಿಜಿಟಲ್ ರೂಪದಲ್ಲೂ ಪ್ರಕಟಿಸುವ ಅಗತ್ಯ ಇದೆ ಎಂದರು.</p>.<p>ಕವಿ ಡಾ. ಸಿದ್ಧಲಿಂಗಯ್ಯ, ‘ಅಸ್ಪೃಶ್ಯತೆ ಎಂಬುದು ದಲಿತರ ಸಮಸ್ಯೆಯಲ್ಲ, ಅದೊಂದು ಸಾಮಾಜಿಕ ಸಮಸ್ಯೆ. ಅದನ್ನು ಹೋಗಲಾಡಿಸಲು ದಲಿತರು ಮಾತ್ರ ಪ್ರಯತ್ನಿಸಿದರೆ ಆಗುವುದಿಲ್ಲ. ಬೇರೆ ಸಮುದಾಯದವರೂ ಕೈಜೋಡಿಸುವ ಅಗತ್ಯವಿದೆ’ ಎಂದು ಹೇಳಿದರು.</p>.<p>‘ದಲಿತರ ಏಳಿಗೆಗಾಗಿ ಹಲವರು ತಮ್ಮ ಜೀವನ ಮುಡಿಪಾಗಿಟ್ಟು ಹೋರಾಟ ನಡೆಸಿದ್ದಾರೆ. ಅಂತಹ ದಲಿತೇತರರ ಬಗ್ಗೆ ಅಧ್ಯಯನಗಳನ್ನು ನಡೆಸಿ ಯುವ ಬರಹಗಾರರು ಪುಸ್ತಕಗಳನ್ನು ಪ್ರಕಟಿಸಬೇಕು. ಅದು ಉಳಿದವರಿಗೂ ಸ್ಫೂರ್ತಿಯಾಗಲಿದೆ’ ಎಂದರು.</p>.<p>‘ಪಂಪ, ರನ್ನರ ಆದಿಯಾಗಿ ಎಲ್ಲಾ ಕನ್ನಡ ಸಾಹಿತ್ಯವನ್ನುಬರಹಗಾರರು ಓದಬೇಕು. ನಮ್ಮದು ಕೇವಲ ಕ್ರಾಂತಿಕಾರಿ ಸಾಹಿತ್ಯ ಎಂದು ಭಾವಿಸಿಕೊಂಡು, ಅನ್ಯ ಸಾಹಿತ್ಯ ಓದದಿದ್ದರೆ ಅವರ ಸಾಹಿತ್ಯವೇ ಬಡವಾಗುತ್ತದೆ. ಸಾಹಿತ್ಯ ಪರಂಪರೆಯ ಅರಿವು ಬರಹಗಾರನಿಗೆ ಇರಬೇಕು’ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಳೆಗನ್ನಡ ಸಾಹಿತ್ಯವನ್ನು ಡಿಜಿಟಲೀಕರಣಗೊಳಿಸುವ ಅಭಿಜಾತ ಕನ್ನಡ ಸಾಹಿತ್ಯ ಕಲ್ಯಾಣ ಯೋಜನೆಗೆ ಬಜೆಟ್ನಲ್ಲಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕೋರಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.</p>.<p>ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ ಬರಹಗಾರರ 58 ಚೊಚ್ಚಲ ಕೃತಿಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘2 ಸಾವಿರ ವರ್ಷಗಳಷ್ಟು ಹಳೆಯದಾದ ಕನ್ನಡ ಸಾಹಿತ್ಯವನ್ನು ಸಂರಕ್ಷಣೆ ಮಾಡುವ ಅಗತ್ಯವಿದೆ. ಅದನ್ನು ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡಿಸಲಾಗಿದೆ. ಅನುದಾನ ನೀಡಲು ಅವರೂ ಒಪ್ಪಿದ್ದಾರೆ’ ಎಂದು ಹೇಳಿದರು.</p>.<p>‘ಪುಸ್ತಕ ಪ್ರಕಟಣೆಗೆ 144 ಕೃತಿಗಳು ಬಂದಿದ್ದವು. ಪರಿಶೀಲನಾ ಸಮಿತಿಯು ಅವುಗಳಲ್ಲಿ 58 ಕೃತಿಗಳನ್ನು ಆಯ್ಕೆ ಮಾಡಿದೆ. ಲಭ್ಯ ಇರುವ ಅನುದಾನಕ್ಕೆ ಸೀಮಿತವಾಗಿ ಪುಸ್ತಕ ಪ್ರಕಟಿಸಲಾಗಿದೆ. ಈ ಕಾರ್ಯಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆಯಿಂದಲೂ ಅನುದಾನ ನೀಡುವಂತೆ ಸಮಾಜ ಕಲ್ಯಾಣ ಸಚಿವರಲ್ಲಿ ಕೋರುತ್ತೇವೆ’ ಎಂದು ಹೇಳಿದರು.</p>.<p>ಯುವ ಸಮೂಹ ಡಿಜಿಟಲ್ ಮಾಧ್ಯಮವನ್ನು ಹೆಚ್ಚಾಗಿ ಅವಲಂಬಿಸುತ್ತಿದೆ. ಹೀಗಾಗಿ, ಪುಸ್ತಕಗಳನ್ನು ಡಿಜಿಟಲ್ ರೂಪದಲ್ಲೂ ಪ್ರಕಟಿಸುವ ಅಗತ್ಯ ಇದೆ ಎಂದರು.</p>.<p>ಕವಿ ಡಾ. ಸಿದ್ಧಲಿಂಗಯ್ಯ, ‘ಅಸ್ಪೃಶ್ಯತೆ ಎಂಬುದು ದಲಿತರ ಸಮಸ್ಯೆಯಲ್ಲ, ಅದೊಂದು ಸಾಮಾಜಿಕ ಸಮಸ್ಯೆ. ಅದನ್ನು ಹೋಗಲಾಡಿಸಲು ದಲಿತರು ಮಾತ್ರ ಪ್ರಯತ್ನಿಸಿದರೆ ಆಗುವುದಿಲ್ಲ. ಬೇರೆ ಸಮುದಾಯದವರೂ ಕೈಜೋಡಿಸುವ ಅಗತ್ಯವಿದೆ’ ಎಂದು ಹೇಳಿದರು.</p>.<p>‘ದಲಿತರ ಏಳಿಗೆಗಾಗಿ ಹಲವರು ತಮ್ಮ ಜೀವನ ಮುಡಿಪಾಗಿಟ್ಟು ಹೋರಾಟ ನಡೆಸಿದ್ದಾರೆ. ಅಂತಹ ದಲಿತೇತರರ ಬಗ್ಗೆ ಅಧ್ಯಯನಗಳನ್ನು ನಡೆಸಿ ಯುವ ಬರಹಗಾರರು ಪುಸ್ತಕಗಳನ್ನು ಪ್ರಕಟಿಸಬೇಕು. ಅದು ಉಳಿದವರಿಗೂ ಸ್ಫೂರ್ತಿಯಾಗಲಿದೆ’ ಎಂದರು.</p>.<p>‘ಪಂಪ, ರನ್ನರ ಆದಿಯಾಗಿ ಎಲ್ಲಾ ಕನ್ನಡ ಸಾಹಿತ್ಯವನ್ನುಬರಹಗಾರರು ಓದಬೇಕು. ನಮ್ಮದು ಕೇವಲ ಕ್ರಾಂತಿಕಾರಿ ಸಾಹಿತ್ಯ ಎಂದು ಭಾವಿಸಿಕೊಂಡು, ಅನ್ಯ ಸಾಹಿತ್ಯ ಓದದಿದ್ದರೆ ಅವರ ಸಾಹಿತ್ಯವೇ ಬಡವಾಗುತ್ತದೆ. ಸಾಹಿತ್ಯ ಪರಂಪರೆಯ ಅರಿವು ಬರಹಗಾರನಿಗೆ ಇರಬೇಕು’ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>