ಸಂವಿಧಾನದ 25ನೇ ಅನುಚ್ಛೇಧದಲ್ಲಿ ನೀಡಿಲಾಗಿರುವ ಇಷ್ಟದ ಧರ್ಮವನ್ನು ಅನುಸರಿಸುವ ಹಾಗೂ ಅದನ್ನು ಪ್ರಚಾರ ಮಾಡುವ ಹಕ್ಕುಗಳ ವಿರುದ್ಧವೂ ಇತ್ತು. ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಜಾರಿಗೆ ತಂದಿದ್ದ ಈ ಕಾಯ್ದೆಯಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಕ್ರೈಸ್ತರ ಮೇಲೆ ದಾಳಿ ಮಾಡುವಂತೆ ಪ್ರೇರೇಪಿಸಿತ್ತು ಎಂದು ಕರ್ನಾಟಕ ಪ್ರಾಂತ್ಯ ಕಥೋಲಿಕ ಧರ್ಮಾಧ್ಯಕ್ಷರ ಮಂಡಳಿ, ಅಖಿಲ ಕರ್ನಾಟಕ ಕ್ರೈಸ್ತ ಮಾನವ ಹಕ್ಕುಗಳ ಒಕ್ಕೂಟ ವೇದಿಕೆ ಅಧ್ಯಕ್ಷರೂ ಆಗಿರುವ ಅವರು ತಿಳಿಸಿದ್ದಾರೆ.