ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಕಲ್‌ನಲ್ಲಿ ಹೋಗುತ್ತಿದ್ದ ಸೇನಾಧಿಕಾರಿಯ ಸುಲಿಗೆ

Last Updated 5 ಡಿಸೆಂಬರ್ 2021, 22:32 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಸೈಕಲ್‌ನಲ್ಲಿ ಸಾಗುತ್ತಿದ್ದ ಸೇನಾಧಿಕಾರಿಯೊಬ್ಬರನ್ನು ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಭಾರತೀಯ ವಾಯು ಸೇನೆಯಲ್ಲಿ ಸಾರ್ಜಂಟ್ ಆಗಿರುವ ವೈಶಾಖ್ ಅವರು ಸುಲಿಗೆ ಬಗ್ಗೆ ದೂರು ನೀಡಿದ್ದಾರೆ. ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಹಲಸೂರಿನ ಸರಸ್ವತಿಪುರದಲ್ಲಿ ವಾಸವಿರುವ ವೈಶಾಖ್, ತಮ್ಮ ಮನೆ ಯಿಂದ ಡಿಸೆಂಬರ್ 3ರಂದು ಬೆಳಿಗ್ಗೆ 5.20ರ ಸುಮಾರಿಗೆ ಸೈಕ್ಲಿಂಗ್‌ಗೆ ಹೊರಟಿದ್ದರು. ಉಪ್ಪಾರಪೇಟೆ ಠಾಣೆ ವ್ಯಾಪ್ತಿಯ ಕೆ.ಜಿ. ರಸ್ತೆಯಲ್ಲಿರುವ ಪೋತಿಸ್ ಬಟ್ಟೆ ಮಾರಾಟ ಮಳಿಗೆ ಬಳಿ 5.40ರ ಸುಮಾರಿಗೆ ಸೈಕಲ್‌ನಲ್ಲಿ ಬಂದಿದ್ದರು.’

‘ಅವರನ್ನು ಹಿಂಬಾಲಿಸಿದ್ದ ಆರೋಪಿಯೊಬ್ಬ ಮಾರ್ಗಮಧ್ಯೆಯೇ ಸೈಕಲ್‌ ತಳ್ಳಿ ಬೀಳಿಸಿದ್ದ. ಮತ್ತೊಬ್ಬ, ಅವರ ಮೊಬೈಲ್ ಕಿತ್ತುಕೊಂಡಿದ್ದ. ನಂತರ, ಇಬ್ಬರೂ ಸ್ಥಳದಿಂದ ಓಡಿಹೋಗಿದ್ದಾರೆ. ಘಟನೆಯಿಂದ ವೈಶಾಖ್ ಅವರ ಬಲಗಾಲು
ಹಾಗೂ ಮುಖಕ್ಕೆ ಗಾಯಗಳಾಗಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು, ನಂತರ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT