ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲಸೂರು ಕೆರೆಯಲ್ಲಿ ಸೂರ್ಯ ದೇವರ ಆರಾಧನೆಗೆ ವ್ಯವಸ್ಥೆ

Published 15 ನವೆಂಬರ್ 2023, 15:24 IST
Last Updated 15 ನವೆಂಬರ್ 2023, 15:24 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ನ.19 ಹಾಗೂ 20ರಂದು ಸೂರ್ಯದೇವರ ಆರಾಧನೆ (ಛತ್‌ ಪೂಜೆ) ನಡೆಯಲಿದ್ದು, ಬಿಬಿಎಂಪಿ ಹಲಸೂರು ಕೆರೆಯಲ್ಲಿ ಪೂಜೆಗೆ ವ್ಯವಸ್ಥೆ ಕಲ್ಪಿಸಿದೆ.

ಕೆರೆಯ ಉತ್ತರ ದಿಕ್ಕಿನ ಅಣ್ಣಸ್ವಾಮಿ ಮೊದಲಿಯಾರ್ ರಸ್ತೆಯ ಮುಖ್ಯದ್ವಾರದ ಮೂಲಕವೇ ಬಂದು ಹಲಸೂರು ಕೆರೆಯ ಕಲ್ಯಾಣಿಯಲ್ಲಿ (ಗಣಪತಿ ವಿಸರ್ಜನೆ ಕಲ್ಯಾಣಿ) ಮಾತ್ರವೇ ಪೂಜೆ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಪ್ಲಾಸ್ಟಿಕ್ ಪೇಪರ್ ಮುಂತಾದ ವಿಷಯುಕ್ತ ವಸ್ತುಗಳನ್ನು ಕೆರೆಯ ಅಂಗಳಕ್ಕೆ ತರಬಾರದೆಂದು ಸೂಚಿಸಲಾಗಿದೆ. ಹಲಸೂರು ಕೆರೆಯ ಬೇರೆ ದಿಕ್ಕಿನ ದ್ವಾರಗಳು ಮುಚ್ಚಿರುತ್ತವೆ. ಪೂರ್ವ ವಲಯದ ಇನ್ನಾವುದೇ ಸ್ಥಳದಲ್ಲಿ ‘ಛ‌ತ್‌ ಪೂಜೆ’ಗೆ ವ್ಯವಸ್ಥೆ ಕಲ್ಪಿಸಿರುವುದಿಲ್ಲ ಎಂದು ವಲಯ ಆಯುಕ್ತೆ ಆರ್. ಸ್ನೇಹಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT