<p><strong>ಬೆಂಗಳೂರು:</strong> ‘ಪರಿಪೂರ್ಣ ಚಾರಿಟಬಲ್ ಟ್ರಸ್ಟ್’ ವ್ಯವಸ್ಥಾಪಕರಿಂದ ₹ 25 ಲಕ್ಷ ಸುಲಿಗೆ ಮಾಡಿದ ಆರೋಪದಡಿ ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ಮಾಜಿ ಪತ್ರಕರ್ತರಾದ ಕಿರಣ್ ಶಾನುಭಾಗ್, ಜಗನ್ನಾಥಗೌಡ ಅವರನ್ನು ನೆಲಮಂಗಲ ಪೊಲೀಸರು ಸೆರೆ ಹಿಡಿದಿದ್ದಾರೆ.</p>.<p>ಮೊಬೈಲ್ ಕರೆ ವಿವರದ (ಸಿಡಿಆರ್) ಸುಳಿವು ಆಧರಿಸಿ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಜಗನ್ನಾಥಗೌಡನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಿರಣ್ ಶಾನುಭಾಗ್ ದಾವಣಗೆರೆ ದೇವಸ್ಥಾನವೊಂದರಲ್ಲಿ ಸೆರೆಸಿಕ್ಕಿದ್ದಾನೆ.</p>.<p>ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ತಮ್ಮ ವಶಕ್ಕೆ ಪಡೆದಿದ್ದ ಪೊಲೀಸರು, ಕಸ್ಟಡಿ ಅವಧಿ ಮುಗಿದಿದ್ದರಿಂದ ಬುಧವಾರ ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.</p>.<p>ಇವರ ವಿರುದ್ಧ ಟ್ರಸ್ಟ್ ವ್ಯವಸ್ಥಾಪಕ ಡಾ.ಎ.ಆರ್.ಶ್ರೀನಿವಾಸ್ ದೂರು ಕೊಟ್ಟಿದ್ದರು. ‘2018ರ ನ.23ರಂದು ಟ್ರಸ್ಟ್ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಕಿರಣ್ ಪರಿಚಯವಾಗಿತ್ತು. ₹ 25 ಲಕ್ಷ ಕೊಡದಿದ್ದರೆ, ನಿಮ್ಮ ಗೌರವಕ್ಕೆ ಧಕ್ಕೆ ತರುವಂತಹ ವಿಡಿಯೊ ಒಂದನ್ನು ಟಿ.ವಿ–9 ವಾಹಿನಿಯಲ್ಲಿ ಪ್ರಸಾರ ಮಾಡುತ್ತೇನೆ ಎಂದು ಬೆದರಿಸಿದ್ದ. ಹೀಗಾಗಿ, ಹಣ ಕೊಟ್ಟಿದ್ದೆ. ಈಗ ಮತ್ತೆ ₹25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾನೆ’ ಎಂದ್ದರು.</p>.<p><strong>ಕಿತ್ತಾಡಿಕೊಂಡು ದೂರಾದರು:</strong> ‘ಎಫ್ಐಆರ್ ದಾಖಲಾದ ಬಳಿಕ ಕಿರಣ್, ಜಗನ್ನಾಥಗೌಡ ಪರಸ್ಪರ ಕಿತ್ತಾಡಿಕೊಂಡಿದ್ದರು. ಕಿರಣ್ ತನ್ನ ಸ್ನೇಹಿತನೊಬ್ಬನ ಕಾರು ತೆಗೆದುಕೊಂಡು ಬೆಳಗಾವಿಗೆ ಹೋದರೆ, ಜಗನ್ನಾಥಗೌಡ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ’ ಎಂದು ನೆಲಮಂಗಲ ಡಿವೈಎಸ್ಪಿ ಪಾಂಡುರಂಗ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕೆಲ ದಿನಗಳ ಬಳಿಕ ಕಿರಣ್ ಕಾರನ್ನು ಬೆಳಗಾವಿಯಲ್ಲೇ ಬಿಟ್ಟು, ಬಸ್ನಲ್ಲಿ ದಾವಣಗೆರೆಗೆ ಮರಳಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ ದೇವಸ್ಥಾನ ಒಂದರಲ್ಲಿ ವಶಕ್ಕೆ ಪಡೆಯಲಾಯಿತು. ₹25 ಲಕ್ಷ ಪಡೆದಿದ್ದನ್ನು ಒಪ್ಪಿಕೊಂಡಿದ್ದು, ಸ್ನೇಹಿತರೊಂದಿಗೆ ಮೋಜು ಮಾಡಿ ಹಣ ಖರ್ಚು ಮಾಡಿದ್ದಾನೆ’ ಎಂದು ಮಾಹಿತಿ ನೀಡಿದರು.</p>.<p><strong>ಶಾಸಕ ಅರವಿಂದ ಲಿಂಬಾವಳಿ ಅವರಿಗೆ</strong><br />₹ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಸಿಸಿಬಿ ಪೊಲೀಸರು ಬಂಧಿಸಿರುವ ‘ಫೋಕಸ್’ ಟಿ.ವಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಹೇಮಂತ್ಕುಮಾರ್ ಕಮ್ಮಾರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.</p>.<p>‘ಆರೋಗ್ಯ ಸಚಿವ ಶಿವಾನಂದ ಪಾಟೀಲ ಅವರಿಗೆ ಸಂಬಂಧಪಟ್ಟ ಸಿ.ಡಿ ತನ್ನ ಬಳಿ ಇರುವುದಾಗಿ ಹೇಳಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಹೇಮಂತ್, ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು’ ಎಂದು ಸಚಿವರ ಆಪ್ತ ಸಹಾಯಕ ಮಾರೇಗೌಡ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗಾವಣೆಗೆ ಲಂಚ ಕೇಳಿದ ರೀತಿಯಲ್ಲಿದ್ದ ನಕಲಿ ಆಡಿಯೊವನ್ನು ನಮಗೆ ಕಳುಹಿಸಿದ್ದ ಹೇಮಂತ್, ‘ಈ ಆಡಿಯೊವನ್ನು ಯಾರೋ ನನಗೆ ಕಳುಹಿಸಿ ₹ 50 ಲಕ್ಷಕ್ಕೆ ಕೇಳುತ್ತಿದ್ದಾರೆ. ನೀವೇ ಹಣ ಕೊಟ್ಟರೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ’ ಎಂದು ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರಿಂದ ಆಡಿಯೊ ಬಿಡುಗಡೆ ಮಾಡಿ ತೇಜೋವಧೆ ಮಾಡಿದ್ದರು’ ಎಂದೂ ಮಾರೇಗೌಡ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪರಿಪೂರ್ಣ ಚಾರಿಟಬಲ್ ಟ್ರಸ್ಟ್’ ವ್ಯವಸ್ಥಾಪಕರಿಂದ ₹ 25 ಲಕ್ಷ ಸುಲಿಗೆ ಮಾಡಿದ ಆರೋಪದಡಿ ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ಮಾಜಿ ಪತ್ರಕರ್ತರಾದ ಕಿರಣ್ ಶಾನುಭಾಗ್, ಜಗನ್ನಾಥಗೌಡ ಅವರನ್ನು ನೆಲಮಂಗಲ ಪೊಲೀಸರು ಸೆರೆ ಹಿಡಿದಿದ್ದಾರೆ.</p>.<p>ಮೊಬೈಲ್ ಕರೆ ವಿವರದ (ಸಿಡಿಆರ್) ಸುಳಿವು ಆಧರಿಸಿ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಜಗನ್ನಾಥಗೌಡನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಿರಣ್ ಶಾನುಭಾಗ್ ದಾವಣಗೆರೆ ದೇವಸ್ಥಾನವೊಂದರಲ್ಲಿ ಸೆರೆಸಿಕ್ಕಿದ್ದಾನೆ.</p>.<p>ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ತಮ್ಮ ವಶಕ್ಕೆ ಪಡೆದಿದ್ದ ಪೊಲೀಸರು, ಕಸ್ಟಡಿ ಅವಧಿ ಮುಗಿದಿದ್ದರಿಂದ ಬುಧವಾರ ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.</p>.<p>ಇವರ ವಿರುದ್ಧ ಟ್ರಸ್ಟ್ ವ್ಯವಸ್ಥಾಪಕ ಡಾ.ಎ.ಆರ್.ಶ್ರೀನಿವಾಸ್ ದೂರು ಕೊಟ್ಟಿದ್ದರು. ‘2018ರ ನ.23ರಂದು ಟ್ರಸ್ಟ್ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಕಿರಣ್ ಪರಿಚಯವಾಗಿತ್ತು. ₹ 25 ಲಕ್ಷ ಕೊಡದಿದ್ದರೆ, ನಿಮ್ಮ ಗೌರವಕ್ಕೆ ಧಕ್ಕೆ ತರುವಂತಹ ವಿಡಿಯೊ ಒಂದನ್ನು ಟಿ.ವಿ–9 ವಾಹಿನಿಯಲ್ಲಿ ಪ್ರಸಾರ ಮಾಡುತ್ತೇನೆ ಎಂದು ಬೆದರಿಸಿದ್ದ. ಹೀಗಾಗಿ, ಹಣ ಕೊಟ್ಟಿದ್ದೆ. ಈಗ ಮತ್ತೆ ₹25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾನೆ’ ಎಂದ್ದರು.</p>.<p><strong>ಕಿತ್ತಾಡಿಕೊಂಡು ದೂರಾದರು:</strong> ‘ಎಫ್ಐಆರ್ ದಾಖಲಾದ ಬಳಿಕ ಕಿರಣ್, ಜಗನ್ನಾಥಗೌಡ ಪರಸ್ಪರ ಕಿತ್ತಾಡಿಕೊಂಡಿದ್ದರು. ಕಿರಣ್ ತನ್ನ ಸ್ನೇಹಿತನೊಬ್ಬನ ಕಾರು ತೆಗೆದುಕೊಂಡು ಬೆಳಗಾವಿಗೆ ಹೋದರೆ, ಜಗನ್ನಾಥಗೌಡ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ’ ಎಂದು ನೆಲಮಂಗಲ ಡಿವೈಎಸ್ಪಿ ಪಾಂಡುರಂಗ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕೆಲ ದಿನಗಳ ಬಳಿಕ ಕಿರಣ್ ಕಾರನ್ನು ಬೆಳಗಾವಿಯಲ್ಲೇ ಬಿಟ್ಟು, ಬಸ್ನಲ್ಲಿ ದಾವಣಗೆರೆಗೆ ಮರಳಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ ದೇವಸ್ಥಾನ ಒಂದರಲ್ಲಿ ವಶಕ್ಕೆ ಪಡೆಯಲಾಯಿತು. ₹25 ಲಕ್ಷ ಪಡೆದಿದ್ದನ್ನು ಒಪ್ಪಿಕೊಂಡಿದ್ದು, ಸ್ನೇಹಿತರೊಂದಿಗೆ ಮೋಜು ಮಾಡಿ ಹಣ ಖರ್ಚು ಮಾಡಿದ್ದಾನೆ’ ಎಂದು ಮಾಹಿತಿ ನೀಡಿದರು.</p>.<p><strong>ಶಾಸಕ ಅರವಿಂದ ಲಿಂಬಾವಳಿ ಅವರಿಗೆ</strong><br />₹ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಸಿಸಿಬಿ ಪೊಲೀಸರು ಬಂಧಿಸಿರುವ ‘ಫೋಕಸ್’ ಟಿ.ವಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಹೇಮಂತ್ಕುಮಾರ್ ಕಮ್ಮಾರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.</p>.<p>‘ಆರೋಗ್ಯ ಸಚಿವ ಶಿವಾನಂದ ಪಾಟೀಲ ಅವರಿಗೆ ಸಂಬಂಧಪಟ್ಟ ಸಿ.ಡಿ ತನ್ನ ಬಳಿ ಇರುವುದಾಗಿ ಹೇಳಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಹೇಮಂತ್, ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು’ ಎಂದು ಸಚಿವರ ಆಪ್ತ ಸಹಾಯಕ ಮಾರೇಗೌಡ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗಾವಣೆಗೆ ಲಂಚ ಕೇಳಿದ ರೀತಿಯಲ್ಲಿದ್ದ ನಕಲಿ ಆಡಿಯೊವನ್ನು ನಮಗೆ ಕಳುಹಿಸಿದ್ದ ಹೇಮಂತ್, ‘ಈ ಆಡಿಯೊವನ್ನು ಯಾರೋ ನನಗೆ ಕಳುಹಿಸಿ ₹ 50 ಲಕ್ಷಕ್ಕೆ ಕೇಳುತ್ತಿದ್ದಾರೆ. ನೀವೇ ಹಣ ಕೊಟ್ಟರೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ’ ಎಂದು ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರಿಂದ ಆಡಿಯೊ ಬಿಡುಗಡೆ ಮಾಡಿ ತೇಜೋವಧೆ ಮಾಡಿದ್ದರು’ ಎಂದೂ ಮಾರೇಗೌಡ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>