ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಮೀನು ಮೇಲೆ ಹೊರಬಂದು ಕಳ್ಳತನ

Last Updated 2 ಅಕ್ಟೋಬರ್ 2022, 22:29 IST
ಅಕ್ಷರ ಗಾತ್ರ

ಬೆಂಗಳೂರು: ಕಳ್ಳತನ ಹಾಗೂ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಗೋವಿಂದಪುರ ಉಮರ್ ನಗರದ ನಿವಾಸಿ ಸುಹೇಲ್ ಖಾನ್ ಅಲಿಯಾಸ್ ಎಂ.ಡಿ (21) ಹಾಗೂ ನಯಾಜ್ ಪಾಷಾ (20) ಬಂಧಿತರು. ಇವರಿಂದ ₹ 16 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನ, 14 ಮೊಬೈಲ್ ಹಾಗೂ ಕ್ಯಾಮೆರಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸುಹೇಲ್ ಹಾಗೂ ನಯಾಜ್, ಹಲವು ವರ್ಷಗಳಿಂದ ಅಪರಾಧ ಕೃತ್ಯ ಎಸಗುತ್ತಿದ್ದರು. ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನ ಕದಿಯುತ್ತಿದ್ದ ಆರೋಪಿಗಳು, ನೋಂದಣಿ ಫಲಕ ಬದಲಾಯಿಸಿ ಮಾರಿ ಹಣ ಸಂಪಾದಿಸುತ್ತಿದ್ದರು.’

‘ವಾಹನ ಕಳ್ಳತನ ಪ್ರಕರಣದಲ್ಲಿ ಗಂಗಮ್ಮನಗುಡಿ ಠಾಣೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಆರೋಪಿಗಳು, ಕೆಲ ತಿಂಗಳು ಜೈಲಿನಲ್ಲಿದ್ದರು. ಜಾಮೀನು ಮೇಲೆ ಹೊರಬಂದು ಕೃತ್ಯ ಮುಂದುವರಿಸಿದ್ದರು. ಕೃತ್ಯದಿಂದ ಬಂದ ಹಣವನ್ನು ಆರೋಪಿಗಳು ದುಶ್ಟಟಗಳಿಗೆ ಖರ್ಚು ಮಾಡುತ್ತಿದ್ದರು. ಹಣ ಸಾಲದಿದ್ದರಿಂದ, ಇತ್ತೀಚೆಗೆ ಸುಲಿಗೆಗೆ ಇಳಿದಿದ್ದರು’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT