ಬಿದರಹಳ್ಳಿ ಹೋಬಳಿಯ ಬೆಳತ್ತೂರು ಗ್ರಾಮದಲ್ಲಿ ಚೌಡೇಶ್ವರಿ ದೇವಾಲಯದ ಸರ್ವೇ 57 ರಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 2 ಎಕರೆ 26 ಗುಂಟೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಒತ್ತುವರಿ ಮಾಡಿ ನಲವತ್ತಕ್ಕೂ ಹೆಚ್ಚು ಐಷಾರಾಮಿ ಬಂಗಲೆ, ವಿಲ್ಲಾ, ಜಿಮ್, ಕ್ಲಬ್, ಈಜುಕೊಳ ಇತರೆ ಅಕ್ರಮ ಕಟ್ಟಡಗಳನ್ನು ನಿರ್ಮಾಣ ಮಾಡಿ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಈ ವೇಳೆ ಬಾಳಪ್ಪ ಹಂದಿಗುಂದತಹಶೀಲ್ಡಾರ್ ಆಗಿದ್ದರು.