ಅಗತ್ಯ ಪ್ರೋತ್ಸಾಹ:ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ‘ಕ್ರೀಡೆಯಲ್ಲಿ ಗೆಲುವು, ಸೋಲಿಗಿಂತ ಭಾಗವಹಿಸುವಿಕೆ ಮುಖ್ಯ. ಆದ್ದರಿಂದಲೇ ‘ಖೇಲೋ ಇಂಡಿಯಾ’ ಕಾರ್ಯಕ್ರಮದ ಮೂಲಕ ದೇಶದಾದ್ಯಂತ ಕ್ರೀಡಾಕೂಟಗಳನ್ನು ನಡೆಸಿ, ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲಾಯಿತು. ದೇಶದಲ್ಲಿ ಕ್ರಿಕೆಟ್ ಆಟಗಾರರು ಹೆಚ್ಚಿನ ವೇತನವನ್ನು ಪಡೆಯುತ್ತಾರೆ. ಇದಕ್ಕೆ ದೊಡ್ಡ ಸಂಖ್ಯೆಯ ವೀಕ್ಷಕರೇ ಮುಖ್ಯ ಕಾರಣ. ಕಬಡ್ಡಿ ಹೊರತುಪಡಿಸಿದರೆ ಉಳಿದ ಲೀಗ್ಗಳು ಯಶಸ್ಸು ಸಾಧಿಸಲಿಲ್ಲ. ಕ್ರೀಡಾ ಕ್ಷೇತ್ರ ಬೆಳವಣಿಗೆ ಹೊಂದಲು ಜನರ ಪಾತ್ರವೂ ಮುಖ್ಯ’ ಎಂದು ಹೇಳಿದರು.