ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ವಕ್ತಾರ ಶ್ರೀನಿವಾಸ್ ಪಟಾಪಟ್, ‘ಒಂಬತ್ತು ರಾಜ್ಯಗಳಿಂದ ಒಂದು ಸಾವಿರ ರೈತರು ಈ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಆರ್ಟ್ ಆಫ್ ಲಿವಿಂಗ್ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ ಗುರೂಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ನರೇಂದ್ರ ಸಿಂಗ್ ತೋಮರ್ ಹಾಗೂ ಗಜೇಂದ್ರ ಸಿಂಗ್ ಶೇಖಾವತ್ ಅವರು ಉಪಸ್ಥಿತರಿರಲಿದ್ದಾರೆ’ ಎಂದು ಹೇಳಿದರು.