<p><strong>ಬೆಂಗಳೂರು:</strong> ನಾರಾಯಣ ಸೇವಾ ಸಂಸ್ಥಾನವು ಬಸವನಗುಡಿಯಲ್ಲಿರುವ ಮಹಾವೀರ ಧರ್ಮಶಾಲಾದಲ್ಲಿ ಮಾರ್ಚ್ 1ರಂದು 640 ಅಂಗವಿಕಲರಿಗೆ ಉಚಿತವಾಗಿ ಕೃತಕ ಕಾಲು ಹಾಗೂ ಸಹಾಯಕ ಸಾಧನಗಳನ್ನು ವಿತರಿಸುವ ಶಿಬಿರ ಹಮ್ಮಿಕೊಂಡಿದೆ.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಪ್ರಶಾಂತ್ ಅಗರ್ವಾಲ್, ‘ಅಂಗವಿಕಲರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಈ ಶಿಬಿರದ ಉದ್ದೇಶವಾಗಿದೆ. ಬೆಳಿಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಕೃತಕ ಕಾಲುಗಳನ್ನು ಅಳವಡಿಕೆ ಮಾಡಲಾಗುತ್ತದೆ. ವಿವಿಧ ಸಂಸ್ಥೆಗಳು ಈ ಕಾರ್ಯಕ್ಕೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್ಆರ್) ನೆರವು ನೀಡುತ್ತಿವೆ’ ಎಂದು ಹೇಳಿದರು.</p>.<p>‘550 ಅಂಗವಿಕಲರಿಗೆ ಅತ್ಯಾಧುನಿಕ ನಾರಾಯಣ ಕೃತಕ ಕಾಲುಗಳನ್ನು, ಉಳಿದವರಿಗೆ ಸಹಾಯಕ ಸಾಧನಗಳನ್ನು ನೀಡಲಾಗುತ್ತದೆ. ಕಳೆದ ಡಿಸೆಂಬರ್ನಲ್ಲಿ ನಡೆದ ಶಿಬಿರದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ’ ಎಂದರು. </p>.<p>‘ಸಂಸ್ಥೆಯ ವತಿಯಿಂದ ಈವರೆಗೆ ದೇಶದ ವಿವಿಧೆಡೆ ಶಿಬಿರ ನಡೆಸಿ, 39 ಸಾವಿರಕ್ಕೂ ಅಧಿಕ ಕೃತಕ ಕಾಲುಗಳನ್ನು ಒದಗಿಸಲಾಗಿದೆ. 4.52 ಲಕ್ಷಕ್ಕೂ ಹೆಚ್ಚು ಅಂಗವಿಕಲರಿಗೆ ಉಚಿತ ವೈದ್ಯಕೀಯ ನೆರವು ನೀಡಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಾರಾಯಣ ಸೇವಾ ಸಂಸ್ಥಾನವು ಬಸವನಗುಡಿಯಲ್ಲಿರುವ ಮಹಾವೀರ ಧರ್ಮಶಾಲಾದಲ್ಲಿ ಮಾರ್ಚ್ 1ರಂದು 640 ಅಂಗವಿಕಲರಿಗೆ ಉಚಿತವಾಗಿ ಕೃತಕ ಕಾಲು ಹಾಗೂ ಸಹಾಯಕ ಸಾಧನಗಳನ್ನು ವಿತರಿಸುವ ಶಿಬಿರ ಹಮ್ಮಿಕೊಂಡಿದೆ.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಪ್ರಶಾಂತ್ ಅಗರ್ವಾಲ್, ‘ಅಂಗವಿಕಲರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಈ ಶಿಬಿರದ ಉದ್ದೇಶವಾಗಿದೆ. ಬೆಳಿಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಕೃತಕ ಕಾಲುಗಳನ್ನು ಅಳವಡಿಕೆ ಮಾಡಲಾಗುತ್ತದೆ. ವಿವಿಧ ಸಂಸ್ಥೆಗಳು ಈ ಕಾರ್ಯಕ್ಕೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್ಆರ್) ನೆರವು ನೀಡುತ್ತಿವೆ’ ಎಂದು ಹೇಳಿದರು.</p>.<p>‘550 ಅಂಗವಿಕಲರಿಗೆ ಅತ್ಯಾಧುನಿಕ ನಾರಾಯಣ ಕೃತಕ ಕಾಲುಗಳನ್ನು, ಉಳಿದವರಿಗೆ ಸಹಾಯಕ ಸಾಧನಗಳನ್ನು ನೀಡಲಾಗುತ್ತದೆ. ಕಳೆದ ಡಿಸೆಂಬರ್ನಲ್ಲಿ ನಡೆದ ಶಿಬಿರದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ’ ಎಂದರು. </p>.<p>‘ಸಂಸ್ಥೆಯ ವತಿಯಿಂದ ಈವರೆಗೆ ದೇಶದ ವಿವಿಧೆಡೆ ಶಿಬಿರ ನಡೆಸಿ, 39 ಸಾವಿರಕ್ಕೂ ಅಧಿಕ ಕೃತಕ ಕಾಲುಗಳನ್ನು ಒದಗಿಸಲಾಗಿದೆ. 4.52 ಲಕ್ಷಕ್ಕೂ ಹೆಚ್ಚು ಅಂಗವಿಕಲರಿಗೆ ಉಚಿತ ವೈದ್ಯಕೀಯ ನೆರವು ನೀಡಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>