'ಸುಮಾರು 700ರಿಂದ 800 ವರ್ಷ ಹಿಂದಿನ ಶಿಲೆಯಲ್ಲಿ ನಂದಿ, ಶಿವ ಮತ್ತು ಪಾರ್ವತಿ, ಭೃಂಗಿ ಮಹರ್ಷಿಯ ಕೆತ್ತನೆ ಇದೆ. ಜೊತೆಗೆ, ವ್ಯಕ್ತಿಯೊಬ್ಬ ಮೃದಂಗ ಬಾರಿಸುತ್ತಿರುವ ಚಿತ್ರವಿದೆ. ಜಲಕಂಠೇಶ್ವರ ದೇವಾಲಯ ನಿರ್ಮಾಣ ವೇಳೆ ಇದನ್ನು ಕೆತ್ತಿರುವ ಸಾಧ್ಯತೆ ಇದೆ ಎಂದು ರಾಜ್ಯ ಪುರಾತತ್ವ ಇಲಾಖೆಯ ನಿರ್ದೇಶಕ ಆರ್. ಗೋಪಾಲ್ ಹೇಳಿದ್ದಾರೆ.