ಒಕ್ಕೂಟದ ಪರವಾಗಿ ಕಲಾವಿದ ಜಯಸಿಂಹ ಎಸ್. ಅವರು ಇಲಾಖೆ ನಿರ್ದೇಶಕ ಪ್ರಕಾಶ್ ನಿಟ್ಟಾಲಿ ಅವರಿಗೆ ಮನವಿ ಸಲ್ಲಿಸಿದರು. ‘ಡಿಸೆಂಬರ್ ಅಂತ್ಯದೊಳಗೆ ಮೂರು ಕಾರ್ಯಕ್ರಮ ಆಯೋಜಿಸಿ, ವರದಿ ಸಲ್ಲಿಸಬೇಕೆನ್ನುವುದು ಅವೈಜ್ಞಾನಿಕ. ಸಂಘ–ಸಂಸ್ಥೆಗಳ ಪದಾಧಿಕಾರಿಗಳಲ್ಲಿ ಬಹುತೇಕರು ಬಡವರಾಗಿದ್ದು, ಜೀವನ ನಿರ್ವಹಣೆಯೂ ಕಷ್ಟವಾಗಿದೆ. ಅವರ ನೆರವಿಗೆ ಬರಬೇಕಾದ ಸರ್ಕಾರ, ಸಂಕಷ್ಟಕ್ಕೆ ನೂಕುತ್ತಿರುವುದು ವಿಪರ್ಯಾಸ’ ಎಂದು ಹೇಳಲಾಗಿದೆ.