<p><strong>ಬೆಂಗಳೂರು</strong>: ‘ಚಿತ್ರ ಕಲಾವಿದರಿಗೆ ಅವಕಾಶಗಳು ಸಿಗುತ್ತಿಲ್ಲ. ಅದರಲ್ಲೂ ತಳ ಸಮುದಾಯಗಳ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದು, ಅವರನ್ನು ತರಬೇತಿಗಳ ಮೂಲಕಮುಖ್ಯವಾಹಿನಿಗೆ ಕರೆತರಬೇಕು’ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ಹೇಳಿದರು.</p>.<p>ಸರ್ಕಾರದ ವಿಶೇಷ ಘಟಕ ಯೋಜನೆಯಡಿ ವಿದ್ಯಾರ್ಥಿ ಹಾಗೂ ಯುವ ಕಲಾವಿದರಿಗೆ ತರಬೇತಿ ನೀಡುವ ಸಲುವಾಗಿ ಕರ್ನಾಟಕ ಲಲಿತಕಲಾ ಅಕಾಡೆಮಿ ಹಾಗೂ ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕಲಾವಿದರು ಎಷ್ಟು ಕಲಿತರೂ ಸಾಲದು. ಹಿರಿಯರಿಂದ ಪಡೆಯುವ ಮಾರ್ಗದರ್ಶನ ಅವರ ನೈಪುಣ್ಯವನ್ನು ಹೆಚ್ಚಿಸುತ್ತದೆ. ಈ ಉದ್ದೇಶದಿಂದ ಅಕಾಡೆಮಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಒಗ್ಗೂಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಕಲಾವಿದರಿಗೆ ಕಾರ್ಯಾಗಾರ ಆಯೋಜಿಸುತ್ತಿದೆ’ ಎಂದರು.</p>.<p>‘ಕಲೆ ಪ್ರತಿಯೊಬ್ಬರಲ್ಲಿರುವ ಸ್ವಾಭಾವಿಕ ಅಂಶ. ಅದನ್ನು ಗುರುತಿಸಿ, ವ್ಯಕ್ತಪಡಿಸುವುದು ಕೆಲವರಿಂದ ಮಾತ್ರ ಸಾಧ್ಯ. ಅಂಗನವಾಡಿಯಲ್ಲಿ ಚಿತ್ರಕಲೆ ಮೂಲಕ ಅಕ್ಷರ ಹೇಳಿಕೊಡುವ ಯೋಜನೆ ಜಾರಿಯಲ್ಲಿದ್ದು, ಸರ್ಕಾರ ಅಗತ್ಯ ನೆರವು ನೀಡಲಿದೆ’ ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಚಿತ್ರ ಕಲಾವಿದರಿಗೆ ಅವಕಾಶಗಳು ಸಿಗುತ್ತಿಲ್ಲ. ಅದರಲ್ಲೂ ತಳ ಸಮುದಾಯಗಳ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದು, ಅವರನ್ನು ತರಬೇತಿಗಳ ಮೂಲಕಮುಖ್ಯವಾಹಿನಿಗೆ ಕರೆತರಬೇಕು’ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ಹೇಳಿದರು.</p>.<p>ಸರ್ಕಾರದ ವಿಶೇಷ ಘಟಕ ಯೋಜನೆಯಡಿ ವಿದ್ಯಾರ್ಥಿ ಹಾಗೂ ಯುವ ಕಲಾವಿದರಿಗೆ ತರಬೇತಿ ನೀಡುವ ಸಲುವಾಗಿ ಕರ್ನಾಟಕ ಲಲಿತಕಲಾ ಅಕಾಡೆಮಿ ಹಾಗೂ ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕಲಾವಿದರು ಎಷ್ಟು ಕಲಿತರೂ ಸಾಲದು. ಹಿರಿಯರಿಂದ ಪಡೆಯುವ ಮಾರ್ಗದರ್ಶನ ಅವರ ನೈಪುಣ್ಯವನ್ನು ಹೆಚ್ಚಿಸುತ್ತದೆ. ಈ ಉದ್ದೇಶದಿಂದ ಅಕಾಡೆಮಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಒಗ್ಗೂಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಕಲಾವಿದರಿಗೆ ಕಾರ್ಯಾಗಾರ ಆಯೋಜಿಸುತ್ತಿದೆ’ ಎಂದರು.</p>.<p>‘ಕಲೆ ಪ್ರತಿಯೊಬ್ಬರಲ್ಲಿರುವ ಸ್ವಾಭಾವಿಕ ಅಂಶ. ಅದನ್ನು ಗುರುತಿಸಿ, ವ್ಯಕ್ತಪಡಿಸುವುದು ಕೆಲವರಿಂದ ಮಾತ್ರ ಸಾಧ್ಯ. ಅಂಗನವಾಡಿಯಲ್ಲಿ ಚಿತ್ರಕಲೆ ಮೂಲಕ ಅಕ್ಷರ ಹೇಳಿಕೊಡುವ ಯೋಜನೆ ಜಾರಿಯಲ್ಲಿದ್ದು, ಸರ್ಕಾರ ಅಗತ್ಯ ನೆರವು ನೀಡಲಿದೆ’ ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>