<p><strong>ಬೆಂಗಳೂರು: </strong>ಆರ್ಯವೈಶ್ಯ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ನೀಡುವ ಅನುದಾನವನ್ನು ₹25 ಕೋಟಿಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಮುಖಂಡ ಟಿ.ಎ.ಶರವಣ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ.</p>.<p>‘ರಾಜ್ಯದಲ್ಲಿ ಕಡಿಮೆ ಜನಸಂಖ್ಯೆ ಹೊಂದಿರುವ ಆರ್ಯವೈಶ್ಯ ಜನಾಂಗವು ಹಿಂದಿನಿಂದಲೂ ಶೋಷಣೆಗೊಳಗಾಗುತ್ತಿದೆ. ಈ ಜನಾಂಗದವರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಬಹಳ ವರ್ಷಗಳಿಂದ ಹೋರಾಟ ನಡೆದಿದೆ. ಅದರ ಫಲವಾಗಿ, ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿತ್ತು. ₹ 11 ಕೋಟಿ ಅನುದಾನವನ್ನೂ ಆಗಿನ ಸರ್ಕಾರ ನಿಗಮಕ್ಕೆ ಬಿಡುಗಡೆ ಮಾಡಿತ್ತು. ಸಾವಿರಕ್ಕೂ ಅಧಿಕ ಫಲಾನುಭವಿಗಳು ಈ ನಿಗಮದ ಪ್ರಯೋಜನ ಪಡೆದಿದ್ದರು. ಆದರೆ, ಈಗಿನ ಸರ್ಕಾರ ನಿಗಮಕ್ಕೆ ಕೇವಲ ₹ 5 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದು ಏನೇನೂ ಸಾಲದು’ ಎಂದು ಅವರು ತಿಳಿಸಿದ್ದಾರೆ.</p>.<p>‘ಸರ್ಕಾರ ಈ ವರ್ಷ ನೀಡಿರುವ ಅನುದಾನದಲ್ಲಿ ಆಡಳಿತಾತ್ಮಕ ವೆಚ್ಚ ಕಳೆದು ₹ 3 ಕೋಟಿಗಳಷ್ಟೇ ಫಲಾನುಭವಿಗಳಿಗೆ ಸಿಗುತ್ತದೆ. ಇದರಲ್ಲಿ 300 ಮಂದಿಗಷ್ಟೇ ಸಹಾಯ ಮಾಡಲು ಸಾಧ್ಯ. ಈಗಾಗಲೇ ಸಹಾಯ ಕೋರಿ ನಿಗಮಕ್ಕೆ 4 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಹಾಗಾಗಿ ಅನುದಾನ ಹೆಚ್ಚಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಆರ್ಯವೈಶ್ಯ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ನೀಡುವ ಅನುದಾನವನ್ನು ₹25 ಕೋಟಿಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಮುಖಂಡ ಟಿ.ಎ.ಶರವಣ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ.</p>.<p>‘ರಾಜ್ಯದಲ್ಲಿ ಕಡಿಮೆ ಜನಸಂಖ್ಯೆ ಹೊಂದಿರುವ ಆರ್ಯವೈಶ್ಯ ಜನಾಂಗವು ಹಿಂದಿನಿಂದಲೂ ಶೋಷಣೆಗೊಳಗಾಗುತ್ತಿದೆ. ಈ ಜನಾಂಗದವರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಬಹಳ ವರ್ಷಗಳಿಂದ ಹೋರಾಟ ನಡೆದಿದೆ. ಅದರ ಫಲವಾಗಿ, ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿತ್ತು. ₹ 11 ಕೋಟಿ ಅನುದಾನವನ್ನೂ ಆಗಿನ ಸರ್ಕಾರ ನಿಗಮಕ್ಕೆ ಬಿಡುಗಡೆ ಮಾಡಿತ್ತು. ಸಾವಿರಕ್ಕೂ ಅಧಿಕ ಫಲಾನುಭವಿಗಳು ಈ ನಿಗಮದ ಪ್ರಯೋಜನ ಪಡೆದಿದ್ದರು. ಆದರೆ, ಈಗಿನ ಸರ್ಕಾರ ನಿಗಮಕ್ಕೆ ಕೇವಲ ₹ 5 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದು ಏನೇನೂ ಸಾಲದು’ ಎಂದು ಅವರು ತಿಳಿಸಿದ್ದಾರೆ.</p>.<p>‘ಸರ್ಕಾರ ಈ ವರ್ಷ ನೀಡಿರುವ ಅನುದಾನದಲ್ಲಿ ಆಡಳಿತಾತ್ಮಕ ವೆಚ್ಚ ಕಳೆದು ₹ 3 ಕೋಟಿಗಳಷ್ಟೇ ಫಲಾನುಭವಿಗಳಿಗೆ ಸಿಗುತ್ತದೆ. ಇದರಲ್ಲಿ 300 ಮಂದಿಗಷ್ಟೇ ಸಹಾಯ ಮಾಡಲು ಸಾಧ್ಯ. ಈಗಾಗಲೇ ಸಹಾಯ ಕೋರಿ ನಿಗಮಕ್ಕೆ 4 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಹಾಗಾಗಿ ಅನುದಾನ ಹೆಚ್ಚಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>