<p><strong>ಬೆಂಗಳೂರು:</strong> ನಾಲ್ಕು ತಿಂಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಬೆಂಗಳೂರು ವಲಯ ಮಟ್ಟದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.</p>.<p>ಪ್ರೋತ್ಸಾಹಧನ ಬಿಡುಗಡೆ ಮಾಡದ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.</p>.<p>ವಿವಿಧೆಡೆಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆಶಾ ಕಾರ್ಯಕರ್ತೆಯರು, ‘ಎನ್ಎಚ್ಎಂ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಪಟ್ಟುಹಿಡಿದರು.</p>.<p>2025ರ ಜನವರಿಯಲ್ಲಿ ತಿಂಗಳಿಗೆ ₹10 ಸಾವಿರ ಪ್ರೋತ್ಸಾಹ ಧನ ನೀಡುವುದಾಗಿ ಮುಖ್ಯಮಂತ್ರಿ ಹೊರಡಿಸಿದ್ದ ಆದೇಶವನ್ನು ಸಾಕಾರಗೊಳಿಸಬೇಕು ಎಂದು ಆಶಾ ಕಾರ್ಯಕರ್ತೆಯರು ಆಗ್ರಹಿಸಿದರು.</p>.<p>ಪ್ರತಿಭಟನೆಯ ನಂತರ ಸಂಘದ ರಾಜ್ಯ ಉಪಾಧ್ಯಕ್ಷೆ ಟಿ.ಸಿ. ರಮಾ ನೇತೃತ್ವದಲ್ಲಿ ಪ್ರತಿಭಟನಕಾರರು ಆರೋಗ್ಯ ಸೌಧಕ್ಕೆ ತೆರಳಿ ಎನ್ಎಚ್ಎಂ ನಿರ್ವಹಣಾಧಿಕಾರಿ ಅವಿನಾಶ್ ಮೆನನ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಬಾಕಿ ಹಣವನ್ನು ಜ. 5ರ ಒಳಗೆ ಬಿಡುಗಡೆ ಮಾಡುವುದಾಗಿ ಅವಿನಾಶ್ ಮೆನನ್ ಅವರು ಭರವಸೆ ನೀಡಿದ್ದಾರೆ ಎಂದು ಸಂಘದ ವಕ್ತಾರ ಶ್ರೀಕಾಂತ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಾಲ್ಕು ತಿಂಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಬೆಂಗಳೂರು ವಲಯ ಮಟ್ಟದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.</p>.<p>ಪ್ರೋತ್ಸಾಹಧನ ಬಿಡುಗಡೆ ಮಾಡದ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.</p>.<p>ವಿವಿಧೆಡೆಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆಶಾ ಕಾರ್ಯಕರ್ತೆಯರು, ‘ಎನ್ಎಚ್ಎಂ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಪಟ್ಟುಹಿಡಿದರು.</p>.<p>2025ರ ಜನವರಿಯಲ್ಲಿ ತಿಂಗಳಿಗೆ ₹10 ಸಾವಿರ ಪ್ರೋತ್ಸಾಹ ಧನ ನೀಡುವುದಾಗಿ ಮುಖ್ಯಮಂತ್ರಿ ಹೊರಡಿಸಿದ್ದ ಆದೇಶವನ್ನು ಸಾಕಾರಗೊಳಿಸಬೇಕು ಎಂದು ಆಶಾ ಕಾರ್ಯಕರ್ತೆಯರು ಆಗ್ರಹಿಸಿದರು.</p>.<p>ಪ್ರತಿಭಟನೆಯ ನಂತರ ಸಂಘದ ರಾಜ್ಯ ಉಪಾಧ್ಯಕ್ಷೆ ಟಿ.ಸಿ. ರಮಾ ನೇತೃತ್ವದಲ್ಲಿ ಪ್ರತಿಭಟನಕಾರರು ಆರೋಗ್ಯ ಸೌಧಕ್ಕೆ ತೆರಳಿ ಎನ್ಎಚ್ಎಂ ನಿರ್ವಹಣಾಧಿಕಾರಿ ಅವಿನಾಶ್ ಮೆನನ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಬಾಕಿ ಹಣವನ್ನು ಜ. 5ರ ಒಳಗೆ ಬಿಡುಗಡೆ ಮಾಡುವುದಾಗಿ ಅವಿನಾಶ್ ಮೆನನ್ ಅವರು ಭರವಸೆ ನೀಡಿದ್ದಾರೆ ಎಂದು ಸಂಘದ ವಕ್ತಾರ ಶ್ರೀಕಾಂತ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>