<p><strong>ಬೆಂಗಳೂರು</strong>: ದೇಶದಲ್ಲಿ ವಾಕ್ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾತ್ರಕ್ಕೆ ಅದನ್ನು ಹಿಂಪಡೆಯಲು ಆಗುವುದಿಲ್ಲ. ಹಾಗೆಯೇ, ವರದಕ್ಷಿಣೆ ಮತ್ತು ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಆಗುತ್ತಿದೆ ಎಂಬ ಕಾರಣಕ್ಕೆ ಆ ಕಾಯ್ದೆಯನ್ನು ರದ್ದಗೊಳಿಸಲು ಆಗುವುದಿಲ್ಲ ಎಂದು ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ಅಶೋಕ ಬಿ. ಹಿಂಚಿಗೇರಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಅವೇಕ್ಷಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಕೀಲೆ ಬಿಂದು ಎನ್. ದೊಡ್ಡಹಟ್ಟಿ ಮತ್ತು ಪ್ರಗ್ಯ ಸೋಲಂಕಿ ಅವರ ‘ಕಾನೂನು ಮತ್ತು ಅದರ ಮಿತಿಗಳು: ಕೌಟುಂಬಿಕ ಹಿಂಸೆ ಮತ್ತು ವೈವಾಹಿಕ ಕ್ರೌರ್ಯದ ಕುರಿತು ಪ್ರಾಯೋಗಿಕ ಅಧ್ಯಯನ’ ವರದಿ ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯನ್ನು ಕೆಲವು ಅತೃಪ್ತ ಮಹಿಳೆಯರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಪುರುಷ ಹಕ್ಕುಗಳ ಕಾರ್ಯಕರ್ತರು ಆರೋಪವಾಗಿದೆ. ಇಂತಹ ಆರೋಪಗಳು, ಕಾರಣ ಮತ್ತು ವಾದವನ್ನು ಒಪ್ಪಲು ಅರ್ಹವೇ ಎಂಬುದನ್ನು ನನಗೆ ನಾನು ಪ್ರಶ್ನಿಸಿಕೊಳ್ಳುತ್ತೇನೆ’ ಎಂದರು.</p>.<p>ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಬೇಕು. ಇದರಲ್ಲಿ ನಾಗರಿಕ ಸಮಾಜ, ವಸ್ತುನಿಷ್ಠ ಮಾಧ್ಯಮಗಳು, ಕಾನೂನು ಜಾರಿ ಸಂಸ್ಥೆಗಳು, ನ್ಯಾಯಾಂಗದ ಪಾತ್ರ ಮುಖ್ಯವಾಗಿದೆ’ ಎಂದು ಅಭಿಪ್ರಾಯಪಟ್ಟರು. </p>.<p>ವಕೀಲೆ ಬಿಂದು ಎನ್. ದೊಡ್ಡಹಟ್ಟಿ ಮಾತನಾಡಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಮಹಿಳಾ ದೌರ್ಜನ್ಯಗಳ ಬಗ್ಗೆ ಪ್ರತ್ಯೇಕವಾಗಿ ಕಾರ್ಯಕ್ರಮಗಳನ್ನು ನಡೆಸಿ, ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಂತ್ವನ ಕೇಂದ್ರಗಳಿಗೆ ಅನುದಾನವನ್ನು ನೀಡಬೇಕು ಎಂದು ಹೇಳಿದರು. </p>.<p>ಸಿಇಎಚ್ಎಟಿ ಮಾಜಿ ನಿರ್ದೇಶಕಿ ಸಂಗೀತಾ ರೇಗೆ, ಪ್ರಾಧ್ಯಾಪಕಿ ಸರಸು ಎಸ್ತರ್ ಥಾಮಸ್, ಅವೇಕ್ಷಾ ಸಂಸ್ಥೆಯ ಡೋನಾ ಫರ್ನಾಂಡಿಸ್, ವಕೀಲರಾದ ಪೂರ್ಣ ರವಿಶಂಕರ್ ಹಾಜರಿದ್ದರು.</p>.<h2>ವರದಿಯ ಶಿಫಾರಸುಗಳು</h2><ul><li><p> ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ದೂರು ಬಂದರೆ ಪೊಲೀಸರು ತಕ್ಷಣ ಎಫ್ಐಆರ್ ದಾಖಲಿಸಿ ಕ್ರಮ ವಹಿಸಬೇಕು. </p></li><li><p>ಕೌಟುಂಬಿಕ ಹಿಂಸಾಚಾರ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಮಾಹಿತಿಯನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ(ಎನ್ಸಿಆರ್ಬಿ) ಪ್ರತ್ಯೇಕವಾಗಿ ದಾಖಲಿಸಬೇಕು. </p></li><li><p>ಕೌಟುಂಬಿಕ ಹಿಂಸಾಚಾರ ಪ್ರಕರಣಗಳಲ್ಲಿ ಜಾತಿ ಧರ್ಮ ವರ್ಗ ಅಂಗವೈಕಲ್ಯ ಮತ್ತು ಆರ್ಥಿಕ ಸ್ಥಿತಿಯ ಮಾಹಿತಿಯನ್ನು ನಮೂದಿಸಬೇಕು. </p></li><li><p>18 ವರ್ಷಕ್ಕಿಂತ ಮೊದಲೇ ವಿವಾಹವಾಗಿರುವ ಬಾಲಕಿಯರು ನೀಡಿದ ದೂರನ್ನು ಪರಿಗಣಿಸಿ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5ರಲ್ಲಿ ದಾಖಲಿಸಬೇಕು.</p></li><li><p> ವಿವಾಹವಾಗಿ ಏಳು ವರ್ಷಗಳ ನಂತರ ವರದಕ್ಷಿಣೆ ಕಿರುಕುಳ ನೀಡಿದರೆ ದೂರು ದಾಖಲಾಗುವುದಿಲ್ಲ. ಇದು ಅವೈಜ್ಞಾನಿಕವಾಗಿದ್ದು ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಅವಧಿಯ ನಿರ್ಬಂಧವನ್ನು ತೆಗೆಯಬೇಕು. </p></li><li><p>ಮಹಿಳಾ ಆತ್ಮಹತ್ಯೆ ಪ್ರಕರಣಗಳಲ್ಲಿ ವರದಕ್ಷಿಣೆ ಕಿರುಕುಳ ಸೇರಿದಂತೆ ಕೌಟುಂಬಿಕ ಹಿಂಸಾಚಾರದ ಬಗ್ಗೆಯೂ ಮಾಹಿತಿಯನ್ನು ಒದಗಿಸಬೇಕು.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೇಶದಲ್ಲಿ ವಾಕ್ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾತ್ರಕ್ಕೆ ಅದನ್ನು ಹಿಂಪಡೆಯಲು ಆಗುವುದಿಲ್ಲ. ಹಾಗೆಯೇ, ವರದಕ್ಷಿಣೆ ಮತ್ತು ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಆಗುತ್ತಿದೆ ಎಂಬ ಕಾರಣಕ್ಕೆ ಆ ಕಾಯ್ದೆಯನ್ನು ರದ್ದಗೊಳಿಸಲು ಆಗುವುದಿಲ್ಲ ಎಂದು ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ಅಶೋಕ ಬಿ. ಹಿಂಚಿಗೇರಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಅವೇಕ್ಷಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಕೀಲೆ ಬಿಂದು ಎನ್. ದೊಡ್ಡಹಟ್ಟಿ ಮತ್ತು ಪ್ರಗ್ಯ ಸೋಲಂಕಿ ಅವರ ‘ಕಾನೂನು ಮತ್ತು ಅದರ ಮಿತಿಗಳು: ಕೌಟುಂಬಿಕ ಹಿಂಸೆ ಮತ್ತು ವೈವಾಹಿಕ ಕ್ರೌರ್ಯದ ಕುರಿತು ಪ್ರಾಯೋಗಿಕ ಅಧ್ಯಯನ’ ವರದಿ ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯನ್ನು ಕೆಲವು ಅತೃಪ್ತ ಮಹಿಳೆಯರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಪುರುಷ ಹಕ್ಕುಗಳ ಕಾರ್ಯಕರ್ತರು ಆರೋಪವಾಗಿದೆ. ಇಂತಹ ಆರೋಪಗಳು, ಕಾರಣ ಮತ್ತು ವಾದವನ್ನು ಒಪ್ಪಲು ಅರ್ಹವೇ ಎಂಬುದನ್ನು ನನಗೆ ನಾನು ಪ್ರಶ್ನಿಸಿಕೊಳ್ಳುತ್ತೇನೆ’ ಎಂದರು.</p>.<p>ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಬೇಕು. ಇದರಲ್ಲಿ ನಾಗರಿಕ ಸಮಾಜ, ವಸ್ತುನಿಷ್ಠ ಮಾಧ್ಯಮಗಳು, ಕಾನೂನು ಜಾರಿ ಸಂಸ್ಥೆಗಳು, ನ್ಯಾಯಾಂಗದ ಪಾತ್ರ ಮುಖ್ಯವಾಗಿದೆ’ ಎಂದು ಅಭಿಪ್ರಾಯಪಟ್ಟರು. </p>.<p>ವಕೀಲೆ ಬಿಂದು ಎನ್. ದೊಡ್ಡಹಟ್ಟಿ ಮಾತನಾಡಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಮಹಿಳಾ ದೌರ್ಜನ್ಯಗಳ ಬಗ್ಗೆ ಪ್ರತ್ಯೇಕವಾಗಿ ಕಾರ್ಯಕ್ರಮಗಳನ್ನು ನಡೆಸಿ, ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಂತ್ವನ ಕೇಂದ್ರಗಳಿಗೆ ಅನುದಾನವನ್ನು ನೀಡಬೇಕು ಎಂದು ಹೇಳಿದರು. </p>.<p>ಸಿಇಎಚ್ಎಟಿ ಮಾಜಿ ನಿರ್ದೇಶಕಿ ಸಂಗೀತಾ ರೇಗೆ, ಪ್ರಾಧ್ಯಾಪಕಿ ಸರಸು ಎಸ್ತರ್ ಥಾಮಸ್, ಅವೇಕ್ಷಾ ಸಂಸ್ಥೆಯ ಡೋನಾ ಫರ್ನಾಂಡಿಸ್, ವಕೀಲರಾದ ಪೂರ್ಣ ರವಿಶಂಕರ್ ಹಾಜರಿದ್ದರು.</p>.<h2>ವರದಿಯ ಶಿಫಾರಸುಗಳು</h2><ul><li><p> ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ದೂರು ಬಂದರೆ ಪೊಲೀಸರು ತಕ್ಷಣ ಎಫ್ಐಆರ್ ದಾಖಲಿಸಿ ಕ್ರಮ ವಹಿಸಬೇಕು. </p></li><li><p>ಕೌಟುಂಬಿಕ ಹಿಂಸಾಚಾರ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಮಾಹಿತಿಯನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ(ಎನ್ಸಿಆರ್ಬಿ) ಪ್ರತ್ಯೇಕವಾಗಿ ದಾಖಲಿಸಬೇಕು. </p></li><li><p>ಕೌಟುಂಬಿಕ ಹಿಂಸಾಚಾರ ಪ್ರಕರಣಗಳಲ್ಲಿ ಜಾತಿ ಧರ್ಮ ವರ್ಗ ಅಂಗವೈಕಲ್ಯ ಮತ್ತು ಆರ್ಥಿಕ ಸ್ಥಿತಿಯ ಮಾಹಿತಿಯನ್ನು ನಮೂದಿಸಬೇಕು. </p></li><li><p>18 ವರ್ಷಕ್ಕಿಂತ ಮೊದಲೇ ವಿವಾಹವಾಗಿರುವ ಬಾಲಕಿಯರು ನೀಡಿದ ದೂರನ್ನು ಪರಿಗಣಿಸಿ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5ರಲ್ಲಿ ದಾಖಲಿಸಬೇಕು.</p></li><li><p> ವಿವಾಹವಾಗಿ ಏಳು ವರ್ಷಗಳ ನಂತರ ವರದಕ್ಷಿಣೆ ಕಿರುಕುಳ ನೀಡಿದರೆ ದೂರು ದಾಖಲಾಗುವುದಿಲ್ಲ. ಇದು ಅವೈಜ್ಞಾನಿಕವಾಗಿದ್ದು ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಅವಧಿಯ ನಿರ್ಬಂಧವನ್ನು ತೆಗೆಯಬೇಕು. </p></li><li><p>ಮಹಿಳಾ ಆತ್ಮಹತ್ಯೆ ಪ್ರಕರಣಗಳಲ್ಲಿ ವರದಕ್ಷಿಣೆ ಕಿರುಕುಳ ಸೇರಿದಂತೆ ಕೌಟುಂಬಿಕ ಹಿಂಸಾಚಾರದ ಬಗ್ಗೆಯೂ ಮಾಹಿತಿಯನ್ನು ಒದಗಿಸಬೇಕು.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>