‘ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಯಾದಿಗೆ ತಮ್ಮ ಹೆಸರು ಸೇರಿಸುವಂತೆ ಕೋರಿ ಅಶೋಕ್ ಖೇಣಿ 2013 ರ ಏಪ್ರಿಲ್ 1ರಂದು ಫಾರಂ-6ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿಯಲ್ಲಿ ಅವರು ಸಹಿ ಮಾಡಿರಲಿಲ್ಲ. ಬದಲಿಗೆ ಅಶೋಕ ಎಂ. ಖೇಣಿ ಸಹಿಯನ್ನು ಅವರ ಸಹೋದರ ಸಂಜಯ್ ಖೇಣಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಶೋಕ್ ಎಂ. ಖೇಣಿ ವಿದೇಶ ಪ್ರವಾಸದಲ್ಲಿದ್ದರು’ ಎಂದು ಆರೋಪಿಸಿ ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನನ್ವಯ ಪೊಲೀಸರು ಖೇಣಿ ಸಹೋದರರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.