‘ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿರುವ, ರೋಗಿಗಳ ಹಾಸಿಗೆಗಳ ಬಟ್ಟೆಗಳನ್ನು ಬದಲಿಸುವ, ನೆಲ ಗುಡಿಸುವ ಹಾಗೂ ಒರೆಸುವ ಸಿಬ್ಬಂದಿಯ ಕಾರ್ಯ ಮೆಚ್ಚುವಂತಹದ್ದು. ಕೋವಿಡ್ ಸಮಯದಲ್ಲಿ ಅವರೆಲ್ಲಾ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಅವರು ಗೌರವಯುತ ಬದುಕು ಕಟ್ಟಿಕೊಳ್ಳಲು ಬೇಕಿರುವ ಅಗತ್ಯ ಸೌಕರ್ಯಗಳನ್ನು ಸರ್ಕಾರ ಕಲ್ಪಿಸಿದೆ. ವೈದ್ಯರು, ಶುಶ್ರೂಷಕಿಯರು, ಅರೆ ವೈದ್ಯ ಸಿಬ್ಬಂದಿ ಮತ್ತು ‘ಡಿ’ ದರ್ಜೆ ನೌಕರರ ವೇತನ ಹಾಗೂ ಭತ್ಯೆಗಳನ್ನೂ ಹೆಚ್ಚಿಸಲಾಗಿದೆ’ ಎಂದರು.