ಮಾತುಕತೆ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ, "ಅಂಗನವಾಡಿ ಕಾರ್ಯಕರ್ತೆಯರ ತರಬೇತಿಗೆ ತಗಲುವ ವೆಚ್ಚವನ್ನು ಡಾ. ಅಶ್ವತ್ಥನಾರಾಯಣ ಫೌಂಡೇಶನ್ ಭರಿಸಲಿದೆ. ಡಾ.ಗುರುರಾಜ ಕರಜಗಿ ನೇತೃತ್ವ ಸಂಸ್ಥೆ ಬೋಧನಾ ಕೌಶಲ, ಸಣ್ಣ ಮಕ್ಕಳ ನಿರ್ವಹಣೆ, ಅವರ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರದ ಕುರಿತು ತರಬೇತಿ ನೀಡಲಿದೆ. ಶೀಘ್ರದಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಡಾ. ಕರಜಗಿ ಅವರು ಈ ಜವಾಬ್ದಾರಿ ವಹಿಸಿಕೊಂಡಿರುವುದು ಬಹಳ ಸಂತಸದ ವಿಷಯ,"ಎಂದು ಹೇಳಿದರು.