ಕರ್ತವ್ಯನಿರತ ಎಎಸ್ಐ ಚಂದ್ರಶೇಖರಯ್ಯ ಸಾವು

ಬೆಂಗಳೂರು: ಹೊಯ್ಸಳ ಗಸ್ತು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಚಂದ್ರಶೇಖರಯ್ಯ (56) ಹೃದಯಾಘಾತದಿಂದಾಗಿ ಶನಿವಾರ ಮೃತಪಟ್ಟಿದ್ದಾರೆ.
ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಬೆಳಿಗ್ಗೆ 8 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಜೆ 5 ಗಂಟೆ ಸುಮಾರಿಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಸಹೋದ್ಯೋಗಿಗಳೇ ಅವರನ್ನು ಸ್ಥಳೀಯ ಲಕ್ಷ್ಮಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದರು ಎಂದು ಪೊಲೀಸರು ಹೇಳಿದರು.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.