<p><strong>ಬೆಂಗಳೂರು: </strong>ಬ್ಯಾಂಕೊಂದರಲ್ಲಿ ಹಾಡಹಗಲೇ ರೌಡಿ ಜೋಸೆಫ್ ಅಲಿಯಾಸ್ ಬಬ್ಲಿ ಕೊಲೆ ನಡೆದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಮಿಷನರ್ ಕಮಲ್ ಪಂತ್, ಕೋರಮಂಗಲ ಠಾಣೆಗೆ ಮಂಗಳವಾರ ರಾತ್ರಿ ದಿಢೀರ್ ಭೇಟಿ ನೀಡಿ ಕೃತ್ಯದ ಬಗ್ಗೆ ಮಾಹಿತಿ ಪಡೆದರು.</p>.<p>ಪತ್ನಿ ಜೊತೆ ಸೋಮವಾರ ಮಧ್ಯಾಹ್ನ ಬ್ಯಾಂಕ್ಗೆ ಬಂದಿದ್ದ ವೇಳೆ ರೌಡಿ ಬಬ್ಲಿ ಹತ್ಯೆಯಾಗಿತ್ತು. ಜನನಿಬಿಡ ಪ್ರದೇಶದಲ್ಲಿ ಕೊಲೆ ನಡೆದಿದ್ದರಿಂದ ಸುತ್ತಮುತ್ತ ಪ್ರದೇಶಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಈ ಬಗ್ಗೆ ಇನ್ಸ್ಪೆಕ್ಟರ್ ರವಿ ಅವರನ್ನು ತರಾಟೆಗೆ ತೆಗೆದುಕೊಂಡ ಕಮಿಷನರ್, ‘ಮುಂದಿನ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ, ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಮಾರಕಾಸ್ತ್ರ ಹಿಡಿದು ಮಧ್ಯಾಹ್ನವೇ ಬ್ಯಾಂಕ್ಗೆ ನುಗ್ಗಿ ಹತ್ಯೆ ಮಾಡುತ್ತಾರೆ ಎಂದರೆ ಏನು ಅರ್ಥ.ಠಾಣೆ ವ್ಯಾಪ್ತಿಯ ರೌಡಿಗಳ ಮೇಲೆ ನಿಗಾ ಇರಿಸಬೇಕು. ರೌಡಿ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಬೇಕಾದ ನೀವು ಹಾಗೂ ನಿಮ್ಮ ಸಿಬ್ಬಂದಿ ಏನು ಮಾಡುತ್ತಿದ್ದೀರಾ?’ ಎಂದೂ ಏರುಧ್ವನಿಯಲ್ಲಿ ಪ್ರಶ್ನಿಸಿದರು.</p>.<p>‘ಇಂಥ ಘಟನೆಗಳು ಮರು ಕಳಿಸಿದರೆ ಠಾಣಾಧಿಕಾರಿಯನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ’ ಎಂದೂ ಎಚ್ಚರಿಕೆ ನೀಡಿದರು.</p>.<p class="Subhead">ಕೊಲೆಗೆ ಪ್ರತೀಕಾರ: ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ರೌಡಿ ಅಪ್ಪು ಕೊಲೆ ಆಗಿತ್ತು. ಅದರಲ್ಲಿ ಬಬ್ಲಿ ಹೆಸರು ಕೇಳಿಬಂದಿತ್ತು. ಅದೇ ಕೊಲೆ ಪ್ರತೀಕಾರವಾಗಿ ಬಬ್ಲಿ ಹತ್ಯೆಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬ್ಯಾಂಕೊಂದರಲ್ಲಿ ಹಾಡಹಗಲೇ ರೌಡಿ ಜೋಸೆಫ್ ಅಲಿಯಾಸ್ ಬಬ್ಲಿ ಕೊಲೆ ನಡೆದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಮಿಷನರ್ ಕಮಲ್ ಪಂತ್, ಕೋರಮಂಗಲ ಠಾಣೆಗೆ ಮಂಗಳವಾರ ರಾತ್ರಿ ದಿಢೀರ್ ಭೇಟಿ ನೀಡಿ ಕೃತ್ಯದ ಬಗ್ಗೆ ಮಾಹಿತಿ ಪಡೆದರು.</p>.<p>ಪತ್ನಿ ಜೊತೆ ಸೋಮವಾರ ಮಧ್ಯಾಹ್ನ ಬ್ಯಾಂಕ್ಗೆ ಬಂದಿದ್ದ ವೇಳೆ ರೌಡಿ ಬಬ್ಲಿ ಹತ್ಯೆಯಾಗಿತ್ತು. ಜನನಿಬಿಡ ಪ್ರದೇಶದಲ್ಲಿ ಕೊಲೆ ನಡೆದಿದ್ದರಿಂದ ಸುತ್ತಮುತ್ತ ಪ್ರದೇಶಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಈ ಬಗ್ಗೆ ಇನ್ಸ್ಪೆಕ್ಟರ್ ರವಿ ಅವರನ್ನು ತರಾಟೆಗೆ ತೆಗೆದುಕೊಂಡ ಕಮಿಷನರ್, ‘ಮುಂದಿನ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ, ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಮಾರಕಾಸ್ತ್ರ ಹಿಡಿದು ಮಧ್ಯಾಹ್ನವೇ ಬ್ಯಾಂಕ್ಗೆ ನುಗ್ಗಿ ಹತ್ಯೆ ಮಾಡುತ್ತಾರೆ ಎಂದರೆ ಏನು ಅರ್ಥ.ಠಾಣೆ ವ್ಯಾಪ್ತಿಯ ರೌಡಿಗಳ ಮೇಲೆ ನಿಗಾ ಇರಿಸಬೇಕು. ರೌಡಿ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಬೇಕಾದ ನೀವು ಹಾಗೂ ನಿಮ್ಮ ಸಿಬ್ಬಂದಿ ಏನು ಮಾಡುತ್ತಿದ್ದೀರಾ?’ ಎಂದೂ ಏರುಧ್ವನಿಯಲ್ಲಿ ಪ್ರಶ್ನಿಸಿದರು.</p>.<p>‘ಇಂಥ ಘಟನೆಗಳು ಮರು ಕಳಿಸಿದರೆ ಠಾಣಾಧಿಕಾರಿಯನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ’ ಎಂದೂ ಎಚ್ಚರಿಕೆ ನೀಡಿದರು.</p>.<p class="Subhead">ಕೊಲೆಗೆ ಪ್ರತೀಕಾರ: ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ರೌಡಿ ಅಪ್ಪು ಕೊಲೆ ಆಗಿತ್ತು. ಅದರಲ್ಲಿ ಬಬ್ಲಿ ಹೆಸರು ಕೇಳಿಬಂದಿತ್ತು. ಅದೇ ಕೊಲೆ ಪ್ರತೀಕಾರವಾಗಿ ಬಬ್ಲಿ ಹತ್ಯೆಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>