ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿ.ಸಿ. ರಮೇಶ್, ‘ಅಧಿಕಾರಿಯನ್ನು ಕರೆದೊಯ್ದು ಪರಿಚಯಿಸಿದ್ದು ಸರಿಯಲ್ಲ’ ಎಂದು ಎಚ್ಚರಿಕೆ ನೀಡಿದ್ದರು. ಈ ವಿಚಾರವಾಗಿ ಮಾತನಾಡಲು ಉಷಾ ರಾಣಿ ಅವರನ್ನು ಮಂಗಳವಾರ ಸಂಜೆ ತಮ್ಮ ಕೊಠಡಿಗೆ ರಮೇಶ್ ಕರೆಸಿದ್ದರು. ಈ ವೇಳೆ ರಮೇಶ್ ಮತ್ತು ಉಷಾರಾಣಿ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಕೊಠಡಿಯಲ್ಲಿದ್ದ ರಮೇಶ್, ನರಸಿಂಹ, ಮುನಿರಾಜು, ಷಣ್ಮುಗಂ ಹಲ್ಲೆ ನಡೆಸಿದ್ದಾರೆ ಎಂದು ಉಷಾರಾಣಿ ಸಹೋದರ ನವೀನ್ ತಿಳಿಸಿದ್ದಾರೆ.