ಇದನ್ನು ಗಮನಿಸಿದ ಸ್ಥಳೀಯರು, ಸ್ಥಳದಿಂದ ಸ್ವಲ್ಪ ದೂರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾಗಡಿ ರಸ್ತೆ ಸಂಚಾರ ಠಾಣೆ ಎಎಸ್ಐ ರಾಮಚಂದ್ರ ಮತ್ತು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಸಂಧ್ಯಾ ಅವರಿಗೆ ಮಾಹಿತಿ ನೀಡಿದ್ದರು. ಬಳಿಕ, ರಾಮಚಂದ್ರ ಆರೋಪಿಗಳ ಆಟೊ ಹಿಂಬಾಲಿಸಿ ಅಡ್ಡಗಟ್ಟಿ ಹಿಡಿದುಕೊಂಡಿದ್ದಾರೆ. ಆಗ ವಿಜಯ್, ತನ್ನ ಬಳಿಯಿದ್ದ ಸರಗಳನ್ನು ಸೇಂಥಿಲ್ಗೆ ಕೈಗೆ ಎಸೆದು ಪರಾರಿಯಾಗುವಂತೆ ಸೂಚಿಸಿದ್ದ. ಆಗ ಕೂಡಲೇ ಕಾರ್ಯ ಪ್ರವೃತ್ತರಾದ ಸಂಧ್ಯಾ ಅವರು ಸೇಂಥಿಲ್ನನ್ನು ಹಿಡಿದುಕೊಂಡಿದ್ದಾರೆ. ಬಳಿಕ ಸ್ಥಳೀಯರ ನೆರವಿನೊಂದಿಗೆ ಇಬ್ಬರು ಆರೋಪಿಗಳನ್ನು ಮಾಗಡಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.