<p><strong>ಬೆಂಗಳೂರು:</strong> ‘ಸ್ನೇಹಿತನ ಜೊತೆ ಸಲುಗೆ ಇಟ್ಟುಕೊಂಡಿರುವ ನನ್ನ ಪತ್ನಿ, ಸುಖಾಸುಮ್ಮನೇ ಜಗಳ ತೆಗೆದು ಮಕ್ಕಳ ಮೇಲೆ ಹಲ್ಲೆ ಮಾಡುತ್ತಿದ್ದಾಳೆ’ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಜಗಜೀವನ್ರಾಮ್ ನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ ವ್ಯಕ್ತಿ ದೂರು ನೀಡಿದ್ದಾರೆ. ಪತ್ನಿ ಹಾಗೂ ಅವರ ಸ್ನೇಹಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರುದಾರ ಹಾಗೂ ಮಹಿಳೆ, 2013ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಜಗಳದಿಂದಾಗಿ ದಂಪತಿ ವಿಚ್ಛೇಧನ ಪಡೆಯಲು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇದರ ಬೆನ್ನಲ್ಲೇ, ಮಹಿಳೆ ಸ್ನೇಹಿತನ ಹೊತೆ ಸೇರಿಕೊಂಡು ಮಕ್ಕಳ ಮೇಲೆ ಹಲ್ಲೆ ಮಾಡುತ್ತಿರುವುದಾಗಿ ದೂರುದಾರ ಆರೋಪಿಸುತ್ತಿದ್ದಾರೆ’ ಎಂದು ತಿಳಿಸಿವೆ.</p>.<p>‘ಮಹಿಳೆಯ ಸ್ನೇಹಿತ, ಸಿಗರೇಟ್ನಿಂದ ಮಕ್ಕಳ ದೇಹಕ್ಕೆ ಸುಟ್ಟಿರುವ ಆರೋಪವಿದೆ. ಇದೊಂದು ಕೌಟುಂಬಿಕ ಗಲಾಟೆ. ಹೀಗಾಗಿ, ಸೂಕ್ತ ಪುರಾವೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸ್ನೇಹಿತನ ಜೊತೆ ಸಲುಗೆ ಇಟ್ಟುಕೊಂಡಿರುವ ನನ್ನ ಪತ್ನಿ, ಸುಖಾಸುಮ್ಮನೇ ಜಗಳ ತೆಗೆದು ಮಕ್ಕಳ ಮೇಲೆ ಹಲ್ಲೆ ಮಾಡುತ್ತಿದ್ದಾಳೆ’ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಜಗಜೀವನ್ರಾಮ್ ನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ ವ್ಯಕ್ತಿ ದೂರು ನೀಡಿದ್ದಾರೆ. ಪತ್ನಿ ಹಾಗೂ ಅವರ ಸ್ನೇಹಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರುದಾರ ಹಾಗೂ ಮಹಿಳೆ, 2013ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಜಗಳದಿಂದಾಗಿ ದಂಪತಿ ವಿಚ್ಛೇಧನ ಪಡೆಯಲು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇದರ ಬೆನ್ನಲ್ಲೇ, ಮಹಿಳೆ ಸ್ನೇಹಿತನ ಹೊತೆ ಸೇರಿಕೊಂಡು ಮಕ್ಕಳ ಮೇಲೆ ಹಲ್ಲೆ ಮಾಡುತ್ತಿರುವುದಾಗಿ ದೂರುದಾರ ಆರೋಪಿಸುತ್ತಿದ್ದಾರೆ’ ಎಂದು ತಿಳಿಸಿವೆ.</p>.<p>‘ಮಹಿಳೆಯ ಸ್ನೇಹಿತ, ಸಿಗರೇಟ್ನಿಂದ ಮಕ್ಕಳ ದೇಹಕ್ಕೆ ಸುಟ್ಟಿರುವ ಆರೋಪವಿದೆ. ಇದೊಂದು ಕೌಟುಂಬಿಕ ಗಲಾಟೆ. ಹೀಗಾಗಿ, ಸೂಕ್ತ ಪುರಾವೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>