‘ನಾನು ಯಾವುದೇ ತಪ್ಪು ಮಾಡಿಲ್ಲವೆಂದು ಗೊತ್ತಾದ ನಂತರ ಮನೆಗೆ ಕಳುಹಿಸಿದ್ದಾರೆ. ಠಾಣೆಯಲ್ಲಾದ ಹಲ್ಲೆ ಬಗ್ಗೆ ಯಾರಿಗೂ ಹೇಳದಂತೆ, ಹೇಳಿದರೆ ಸುಮ್ಮನೇ ಬಿಡುವುದಿಲ್ಲವೆಂದು ಇನ್ಸ್ಪೆಕ್ಟರ್ ಬೆದರಿಕೆ ಸಹ ಹಾಕಿದ್ದಾರೆ. ನಾನೀಗ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಹಾಸಿಗೆಯಿಂದ ಮೇಲೇಳಲು ಆಗುತ್ತಿಲ್ಲ. ಅಧಿಕಾರ ದುರುಪಯೋಗಪಡಿಸಿಕೊಂಡು ಹಲ್ಲೆ ಮಾಡಿ ಬೆದರಿಕೆ ಹಾಕಿರುವ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದೂ ನಾಗರಾಜ್ ಒತ್ತಾಯಿಸಿದ್ದಾರೆ.