<p><strong>ಬೆಂಗಳೂರು</strong>: ಮಾಜಿ ಸಂಸದ ಮಂಜುನಾಥ್ ಕುನ್ನೂರ ಅವರ ಮಗ ಚಂದ್ರಶೇಖರ್ ಹಾಗೂ ಸ್ನೇಹಿತನ ಮೇಲೆ ಹಲ್ಲೆ ನಡೆದಿದ್ದು, ಈ ಬಗ್ಗೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜ. 23ರಂದು ರಾತ್ರಿ ನಡೆದಿರುವ ಘಟನೆ ಬಗ್ಗೆ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ. ಆರೋಪಿಗಳು ಎನ್ನಲಾದ ಚೇತನ್ ಹಾಗೂ ಪ್ರಶಾಂತ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಉದ್ಯಮಿಯೂ ಆಗಿರುವ ಚಂದ್ರಶೇಖರ್, ಸ್ನೇಹಿತನ ಜೊತೆ ಊಟಕ್ಕೆಂದು ಹೋಟೆಲೊಂದಕ್ಕೆ ಹೋಗಿದ್ದರು. ಊಟದ ಟೇಬಲ್ ಬಳಿ ಕುಳಿತು ಮಾತನಾಡುತ್ತಿದ್ದರು. ಪಕ್ಕದ ಟೇಬಲ್ನಲ್ಲಿ ಕುಳಿತಿದ್ದ ಆರೋಪಿಗಳು, ಊಟ ಮಾಡದಂತೆ ಎಚ್ಚರಿಕೆ ನೀಡಿ ಜಗಳ ತೆಗೆದಿದ್ದರು.’</p>.<p>‘ಚಂದ್ರಶೇಖರ್ ಹಾಗೂ ಸ್ನೇಹಿತನನ್ನು ಸಮೀಪದಲ್ಲೇ ಇದ್ದ ಮತ್ತೊಂದು ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಆರೋಪಿಗಳು ಎಳೆದೊಯ್ದಿದ್ದರು. ಅಲ್ಲಿಯೇ ಚಂದ್ರಶೇಖರ್ ಕಪಾಳಕ್ಕೆ ಹೊಡೆದು, ಹಲ್ಲೆ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದರು. ಅಲ್ಲಿಂದ ತಪ್ಪಿಸಿಕೊಂಡು ಬಂದು ಚಂದ್ರಶೇಖರ್ ದೂರು ನೀಡಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.</p>.<p>‘ಕರ್ಫ್ಯೂ ಜಾರಿಯಲ್ಲಿದ್ದರೂ ವಹಿವಾಟು ನಡೆಸುತ್ತಿದ್ದ ಆರೋಪದಡಿ ಬಾರ್ ಆ್ಯಂಡ್ ರೆಸ್ಟೋರೆಂಟ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಲ್ಲೆ ಪ್ರಕರಣದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹಲ್ಲೆಗೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಾಜಿ ಸಂಸದ ಮಂಜುನಾಥ್ ಕುನ್ನೂರ ಅವರ ಮಗ ಚಂದ್ರಶೇಖರ್ ಹಾಗೂ ಸ್ನೇಹಿತನ ಮೇಲೆ ಹಲ್ಲೆ ನಡೆದಿದ್ದು, ಈ ಬಗ್ಗೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜ. 23ರಂದು ರಾತ್ರಿ ನಡೆದಿರುವ ಘಟನೆ ಬಗ್ಗೆ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ. ಆರೋಪಿಗಳು ಎನ್ನಲಾದ ಚೇತನ್ ಹಾಗೂ ಪ್ರಶಾಂತ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಉದ್ಯಮಿಯೂ ಆಗಿರುವ ಚಂದ್ರಶೇಖರ್, ಸ್ನೇಹಿತನ ಜೊತೆ ಊಟಕ್ಕೆಂದು ಹೋಟೆಲೊಂದಕ್ಕೆ ಹೋಗಿದ್ದರು. ಊಟದ ಟೇಬಲ್ ಬಳಿ ಕುಳಿತು ಮಾತನಾಡುತ್ತಿದ್ದರು. ಪಕ್ಕದ ಟೇಬಲ್ನಲ್ಲಿ ಕುಳಿತಿದ್ದ ಆರೋಪಿಗಳು, ಊಟ ಮಾಡದಂತೆ ಎಚ್ಚರಿಕೆ ನೀಡಿ ಜಗಳ ತೆಗೆದಿದ್ದರು.’</p>.<p>‘ಚಂದ್ರಶೇಖರ್ ಹಾಗೂ ಸ್ನೇಹಿತನನ್ನು ಸಮೀಪದಲ್ಲೇ ಇದ್ದ ಮತ್ತೊಂದು ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಆರೋಪಿಗಳು ಎಳೆದೊಯ್ದಿದ್ದರು. ಅಲ್ಲಿಯೇ ಚಂದ್ರಶೇಖರ್ ಕಪಾಳಕ್ಕೆ ಹೊಡೆದು, ಹಲ್ಲೆ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದರು. ಅಲ್ಲಿಂದ ತಪ್ಪಿಸಿಕೊಂಡು ಬಂದು ಚಂದ್ರಶೇಖರ್ ದೂರು ನೀಡಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.</p>.<p>‘ಕರ್ಫ್ಯೂ ಜಾರಿಯಲ್ಲಿದ್ದರೂ ವಹಿವಾಟು ನಡೆಸುತ್ತಿದ್ದ ಆರೋಪದಡಿ ಬಾರ್ ಆ್ಯಂಡ್ ರೆಸ್ಟೋರೆಂಟ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಲ್ಲೆ ಪ್ರಕರಣದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹಲ್ಲೆಗೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>