ಮುಖ್ಯಮಂತ್ರಿ ಚಂದ್ರು ಮಾತನಾಡಿ, ‘ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ನಾಯಕ ಸಿ.ಪಿ.ಶರತ್ ಚಂದ್ರ ಆಪ್ಗೆ ಸೇರ್ಪಡೆಯಾಗಿರುವುದರಿಂದ ಪಕ್ಷ ಸಂಘಟನೆಗೆ ಆನೆಬಲ ಬರಲಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಂತಾದ ಸಾಂಪ್ರದಾಯಿಕ ಪಕ್ಷಗಳ ನಿಷ್ಕ್ರಿಯತೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನಿಲುವುಗಳಿಂದಾಗಿ ಆ ಪಕ್ಷಗಳ ಪ್ರಾಮಾಣಿಕ ನಾಯಕರು ಆಮ್ ಆದ್ಮಿ ಪಾರ್ಟಿ ಸೇರುತ್ತಿದ್ದಾರೆ’ ಎಂದರು.