<p><strong>ಬೆಂಗಳೂರು:</strong> ‘ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವ ನಾಶವಾದಾಗ ಪ್ರಜಾಪ್ರಭುತ್ವವೂ ನಾಶವಾಗುತ್ತದೆ. ನಮ್ಮ ರಾಜಕೀಯ ಪಕ್ಷಗಳು ಕುಟುಂಬಗಳ ಹಿಡಿತದಲ್ಲಿವೆ. ಅವುಗಳಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆಯಾ’ ಎಂದು ಕಾಂಗ್ರೆಸ್ನ ಹಿರಿಯ ಸದಸ್ಯ ಕೆ.ಆರ್.ರಮೇಶ್ ಕುಮಾರ್ ಪ್ರಶ್ನಿಸಿದರು.</p>.<p>ವಿಧಾನಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಸಂಬಂಧಿಗಳನ್ನು ವಿಧಾನಸೌಧದಿಂದ ದೂರ ಇಡುತ್ತೇವೆ ಎಂಬುದಾಗಿ ಶಾಸಕರು ಪ್ರಮಾಣ ಮಾಡಬೇಕು ಎಂದು ಶಿವಮೂರ್ತಿ ಶಿವಾಚಾರ್ಯರು ಸಲಹೆ ನೀಡಿದ್ದರು. ಆದರೆ, ಈಗ ನಾವು ಕುಟುಂಬ ಸದಸ್ಯರನ್ನೇ ಉತ್ತರಾಧಿಕಾರಿಗಳನ್ನಾಗಿ ಮಾಡುತ್ತಿದ್ದೇವೆ’ ಎಂದರು.</p>.<p>‘ರಿಯಲ್ ಎಸ್ಟೇಟ್ ಉದ್ಯಮಿಗಳು ಆರಂಭದಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ಗೆಲ್ಲುತ್ತಾರೆ. ಮರುವರ್ಷವೇ ವಿಧಾನಸೌಧ ಪ್ರವೇಶಿಸುತ್ತಾರೆ. ಚುನಾವಣಾ ಆಯೋಗದ ಧೋರಣೆಯೂ ಇಂತಹ ಬೆಳವಣಿಗೆಗೆ ಕಾರಣ. ನಾಮಪತ್ರ ಸಲ್ಲಿಕೆಯ ವೇಳೆಗೆ ನಾವು ಆಸ್ತಿ ಘೋಷಣೆ ಮಾಡುತ್ತೇವೆಯಲ್ಲ. ನಾವು ₹360 ಕೋಟಿ ಆಸ್ತಿ ಘೋಷಣೆ ಮಾಡಿದರೂ ಆಯೋಗ ತನಿಖೆ ನಡೆಸುವುದಿಲ್ಲ. ಐದು ವರ್ಷಗಳಲ್ಲಿ ಆಸ್ತಿ ಹೆಚ್ಚಳ ಹೇಗಾಯಿತು ಎಂದು ತನಿಖೆ ಮಾಡಿಸಲಿ. ಆಗ ಎಲ್ಲವೂ ಸುಧಾರಣೆಯಾಗುತ್ತದೆ’ ಎಂದು ಅವರು ಪ್ರತಿಪಾದಿಸಿದರು.</p>.<p><strong>ಅವರು ಹೇಳಿದ್ದಿಷ್ಟು:</strong><br />*ಇಲ್ಲಿ ಪರಿಶಿಷ್ಟ ಜಾತಿಯ ಹಲವಾರು ಶಾಸಕರು ಇದ್ದಾರೆ. ಸವರ್ಣಿಯರ ಮತಗಳಿಲ್ಲದೆ ಗೆದ್ದು ಬರುವ ಧೈರ್ಯ ಯಾರಿಗಾದರೂ ಇದೆಯಾ?<br />*ಗ್ರಾಮ ಪಂಚಾಯಿತಿ ಚುನಾವಣೆಯಾದ ಬಳಿಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಪ್ರಕಟಿಸುತ್ತೇವೆ. ಅದರ ಬದಲು, ಸದಸ್ಯರ ಆಯ್ಕೆಗೆ ಚುನಾವಣೆ ವೇಳೆಯೇ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟಿಸಿ.<br />*ಪುಣೆ ಒಪ್ಪಂದ ಜಾರಿಗೆ ಬಾರದೇ ಇದ್ದಿದ್ದರೆ ಅಂಬೇಡ್ಕರ್ ಸೋಲುತ್ತಿರಲಿಲ್ಲ. ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ದೊಡ್ಡ ಮನಸ್ಸು ಕಾಂಗ್ರೆಸ್ ನಾಯಕರಿಗೆ ಇರಲಿಲ್ಲ.<br />*ಅಂಬೇಡ್ಕರ್ ನಿಧನರಾದಾಗ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಸ್ಥಳ ನೀಡಲಿಲ್ಲ. ಪಾರ್ಥೀವ ಶರೀರವನ್ನು ಮುಂಬೈಗೆ ತರಲು ನೆರವು ನೀಡಲಿಲ್ಲ. ಇದು ಕಾಂಗ್ರೆಸ್ ಪಕ್ಷ ಮಾಡಿದ ಬಹುದೊಡ್ಡ ತಪ್ಪು. ಈಗ ಅಂಬೇಡ್ಕರ್ ಅವರನ್ನು ಹಾಡಿ ಹೊಗಳಬಹುದು. ಪ್ರಶಸ್ತಿಗಳನ್ನು ಕೊಟ್ಟಿರಬಹುದು. ಆದರೆ, ಅಂದು ಮಾಡಿದ ತಪ್ಪು ಅಕ್ಷಮ್ಯ.<br />*ಅಂಬೇಡ್ಕರ್ ಹಣತೆ ಇದ್ದಂತೆ. ಅವರನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೀಮಿತ ಮಾಡಿದ್ದೇವೆ. ಅವರೊಬ್ಬ ಮಾನವತಾವಾದಿ ಎಂದು ಒಪ್ಪಿಕೊಳ್ಳುವ ಉದಾರ ಮನಸ್ಸು ನಮಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವ ನಾಶವಾದಾಗ ಪ್ರಜಾಪ್ರಭುತ್ವವೂ ನಾಶವಾಗುತ್ತದೆ. ನಮ್ಮ ರಾಜಕೀಯ ಪಕ್ಷಗಳು ಕುಟುಂಬಗಳ ಹಿಡಿತದಲ್ಲಿವೆ. ಅವುಗಳಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆಯಾ’ ಎಂದು ಕಾಂಗ್ರೆಸ್ನ ಹಿರಿಯ ಸದಸ್ಯ ಕೆ.ಆರ್.ರಮೇಶ್ ಕುಮಾರ್ ಪ್ರಶ್ನಿಸಿದರು.</p>.<p>ವಿಧಾನಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಸಂಬಂಧಿಗಳನ್ನು ವಿಧಾನಸೌಧದಿಂದ ದೂರ ಇಡುತ್ತೇವೆ ಎಂಬುದಾಗಿ ಶಾಸಕರು ಪ್ರಮಾಣ ಮಾಡಬೇಕು ಎಂದು ಶಿವಮೂರ್ತಿ ಶಿವಾಚಾರ್ಯರು ಸಲಹೆ ನೀಡಿದ್ದರು. ಆದರೆ, ಈಗ ನಾವು ಕುಟುಂಬ ಸದಸ್ಯರನ್ನೇ ಉತ್ತರಾಧಿಕಾರಿಗಳನ್ನಾಗಿ ಮಾಡುತ್ತಿದ್ದೇವೆ’ ಎಂದರು.</p>.<p>‘ರಿಯಲ್ ಎಸ್ಟೇಟ್ ಉದ್ಯಮಿಗಳು ಆರಂಭದಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ಗೆಲ್ಲುತ್ತಾರೆ. ಮರುವರ್ಷವೇ ವಿಧಾನಸೌಧ ಪ್ರವೇಶಿಸುತ್ತಾರೆ. ಚುನಾವಣಾ ಆಯೋಗದ ಧೋರಣೆಯೂ ಇಂತಹ ಬೆಳವಣಿಗೆಗೆ ಕಾರಣ. ನಾಮಪತ್ರ ಸಲ್ಲಿಕೆಯ ವೇಳೆಗೆ ನಾವು ಆಸ್ತಿ ಘೋಷಣೆ ಮಾಡುತ್ತೇವೆಯಲ್ಲ. ನಾವು ₹360 ಕೋಟಿ ಆಸ್ತಿ ಘೋಷಣೆ ಮಾಡಿದರೂ ಆಯೋಗ ತನಿಖೆ ನಡೆಸುವುದಿಲ್ಲ. ಐದು ವರ್ಷಗಳಲ್ಲಿ ಆಸ್ತಿ ಹೆಚ್ಚಳ ಹೇಗಾಯಿತು ಎಂದು ತನಿಖೆ ಮಾಡಿಸಲಿ. ಆಗ ಎಲ್ಲವೂ ಸುಧಾರಣೆಯಾಗುತ್ತದೆ’ ಎಂದು ಅವರು ಪ್ರತಿಪಾದಿಸಿದರು.</p>.<p><strong>ಅವರು ಹೇಳಿದ್ದಿಷ್ಟು:</strong><br />*ಇಲ್ಲಿ ಪರಿಶಿಷ್ಟ ಜಾತಿಯ ಹಲವಾರು ಶಾಸಕರು ಇದ್ದಾರೆ. ಸವರ್ಣಿಯರ ಮತಗಳಿಲ್ಲದೆ ಗೆದ್ದು ಬರುವ ಧೈರ್ಯ ಯಾರಿಗಾದರೂ ಇದೆಯಾ?<br />*ಗ್ರಾಮ ಪಂಚಾಯಿತಿ ಚುನಾವಣೆಯಾದ ಬಳಿಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಪ್ರಕಟಿಸುತ್ತೇವೆ. ಅದರ ಬದಲು, ಸದಸ್ಯರ ಆಯ್ಕೆಗೆ ಚುನಾವಣೆ ವೇಳೆಯೇ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟಿಸಿ.<br />*ಪುಣೆ ಒಪ್ಪಂದ ಜಾರಿಗೆ ಬಾರದೇ ಇದ್ದಿದ್ದರೆ ಅಂಬೇಡ್ಕರ್ ಸೋಲುತ್ತಿರಲಿಲ್ಲ. ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ದೊಡ್ಡ ಮನಸ್ಸು ಕಾಂಗ್ರೆಸ್ ನಾಯಕರಿಗೆ ಇರಲಿಲ್ಲ.<br />*ಅಂಬೇಡ್ಕರ್ ನಿಧನರಾದಾಗ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಸ್ಥಳ ನೀಡಲಿಲ್ಲ. ಪಾರ್ಥೀವ ಶರೀರವನ್ನು ಮುಂಬೈಗೆ ತರಲು ನೆರವು ನೀಡಲಿಲ್ಲ. ಇದು ಕಾಂಗ್ರೆಸ್ ಪಕ್ಷ ಮಾಡಿದ ಬಹುದೊಡ್ಡ ತಪ್ಪು. ಈಗ ಅಂಬೇಡ್ಕರ್ ಅವರನ್ನು ಹಾಡಿ ಹೊಗಳಬಹುದು. ಪ್ರಶಸ್ತಿಗಳನ್ನು ಕೊಟ್ಟಿರಬಹುದು. ಆದರೆ, ಅಂದು ಮಾಡಿದ ತಪ್ಪು ಅಕ್ಷಮ್ಯ.<br />*ಅಂಬೇಡ್ಕರ್ ಹಣತೆ ಇದ್ದಂತೆ. ಅವರನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೀಮಿತ ಮಾಡಿದ್ದೇವೆ. ಅವರೊಬ್ಬ ಮಾನವತಾವಾದಿ ಎಂದು ಒಪ್ಪಿಕೊಳ್ಳುವ ಉದಾರ ಮನಸ್ಸು ನಮಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>