ಅವರು ಹೇಳಿದ್ದಿಷ್ಟು:
*ಇಲ್ಲಿ ಪರಿಶಿಷ್ಟ ಜಾತಿಯ ಹಲವಾರು ಶಾಸಕರು ಇದ್ದಾರೆ. ಸವರ್ಣಿಯರ ಮತಗಳಿಲ್ಲದೆ ಗೆದ್ದು ಬರುವ ಧೈರ್ಯ ಯಾರಿಗಾದರೂ ಇದೆಯಾ?
*ಗ್ರಾಮ ಪಂಚಾಯಿತಿ ಚುನಾವಣೆಯಾದ ಬಳಿಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಪ್ರಕಟಿಸುತ್ತೇವೆ. ಅದರ ಬದಲು, ಸದಸ್ಯರ ಆಯ್ಕೆಗೆ ಚುನಾವಣೆ ವೇಳೆಯೇ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟಿಸಿ.
*ಪುಣೆ ಒಪ್ಪಂದ ಜಾರಿಗೆ ಬಾರದೇ ಇದ್ದಿದ್ದರೆ ಅಂಬೇಡ್ಕರ್ ಸೋಲುತ್ತಿರಲಿಲ್ಲ. ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ದೊಡ್ಡ ಮನಸ್ಸು ಕಾಂಗ್ರೆಸ್ ನಾಯಕರಿಗೆ ಇರಲಿಲ್ಲ.
*ಅಂಬೇಡ್ಕರ್ ನಿಧನರಾದಾಗ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಸ್ಥಳ ನೀಡಲಿಲ್ಲ. ಪಾರ್ಥೀವ ಶರೀರವನ್ನು ಮುಂಬೈಗೆ ತರಲು ನೆರವು ನೀಡಲಿಲ್ಲ. ಇದು ಕಾಂಗ್ರೆಸ್ ಪಕ್ಷ ಮಾಡಿದ ಬಹುದೊಡ್ಡ ತಪ್ಪು. ಈಗ ಅಂಬೇಡ್ಕರ್ ಅವರನ್ನು ಹಾಡಿ ಹೊಗಳಬಹುದು. ಪ್ರಶಸ್ತಿಗಳನ್ನು ಕೊಟ್ಟಿರಬಹುದು. ಆದರೆ, ಅಂದು ಮಾಡಿದ ತಪ್ಪು ಅಕ್ಷಮ್ಯ.
*ಅಂಬೇಡ್ಕರ್ ಹಣತೆ ಇದ್ದಂತೆ. ಅವರನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೀಮಿತ ಮಾಡಿದ್ದೇವೆ. ಅವರೊಬ್ಬ ಮಾನವತಾವಾದಿ ಎಂದು ಒಪ್ಪಿಕೊಳ್ಳುವ ಉದಾರ ಮನಸ್ಸು ನಮಗಿಲ್ಲ.