<p><strong>ಬೆಂಗಳೂರು</strong>: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಆರೋಪದಡಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಕಸ್ಟಮ್ಸ್ ಇಲಾಖೆಯ ನಿವೃತ್ತ ಅಧೀಕ್ಷಕ ವಿ. ವಿಶ್ವೇಶ್ವರ ಭಟ್ ಅಪರಾಧಿ ಎಂದು ಸಾರಿರುವ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಲಯ, ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು ₹ 26.25 ಲಕ್ಷ ದಂಡ ವಿಧಿಸಿದೆ.</p>.<p>ಬೆಂಗಳೂರಿನ ಏರ್ ಕಸ್ಟಮ್ಸ್ ಕಮಿಷನರೇಟ್ನ ಏರ್ ಕಾರ್ಗೋ ಸಂಕೀರ್ಣದಲ್ಲಿ ಅಧೀಕ್ಷಕರಾಗಿದ್ದ ವಿಶ್ವೇಶ್ವರ ಭಟ್ ವಿರುದ್ಧ ಸಿಬಿಐನ ಭ್ರಷ್ಟಾಚಾರ ನಿಯಂತ್ರಣ ಘಟಕವು 2016ರ ಮಾರ್ಚ್ 31ರಂದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. 2010ರ ಜನವರಿ 1ರಿಂದ 2016ರ ಮಾರ್ಚ್ 16ರ ಅವಧಿಯಲ್ಲಿ ಆರೋಪಿಯು ₹ 39.65 ಲಕ್ಷಗಳಷ್ಟು ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದರು ಎಂಬ ಆರೋಪ ಎಫ್ಐಆರ್ನಲ್ಲಿತ್ತು.</p>.<p>ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದ ಸಿಬಿಐ, 2017ರ ಸೆಪ್ಟೆಂಬರ್ 27ರಂದು ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು. ಆರೋಪಿಯು ₹ 28.38 ಲಕ್ಷ ಮೌಲ್ಯದ (ಶೇ 61.94) ಅಕ್ರಮ ಆಸ್ತಿ ಹೊಂದಿರುವುದು ದೃಢಪಟ್ಟಿದೆ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು.</p>.<p>ವಿಚಾರಣೆ ಪೂರ್ಣಗೊಳಿಸಿ ಆದೇಶ ಪ್ರಕಟಿಸಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ವಿಶ್ವೇಶ್ವರ ಭಟ್ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂಬ ತೀರ್ಮಾನ ನೀಡಿದ್ದಾರೆ. ಅಪರಾಧಿಗೆ ಜೈಲು ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಿ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಆರೋಪದಡಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಕಸ್ಟಮ್ಸ್ ಇಲಾಖೆಯ ನಿವೃತ್ತ ಅಧೀಕ್ಷಕ ವಿ. ವಿಶ್ವೇಶ್ವರ ಭಟ್ ಅಪರಾಧಿ ಎಂದು ಸಾರಿರುವ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಲಯ, ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು ₹ 26.25 ಲಕ್ಷ ದಂಡ ವಿಧಿಸಿದೆ.</p>.<p>ಬೆಂಗಳೂರಿನ ಏರ್ ಕಸ್ಟಮ್ಸ್ ಕಮಿಷನರೇಟ್ನ ಏರ್ ಕಾರ್ಗೋ ಸಂಕೀರ್ಣದಲ್ಲಿ ಅಧೀಕ್ಷಕರಾಗಿದ್ದ ವಿಶ್ವೇಶ್ವರ ಭಟ್ ವಿರುದ್ಧ ಸಿಬಿಐನ ಭ್ರಷ್ಟಾಚಾರ ನಿಯಂತ್ರಣ ಘಟಕವು 2016ರ ಮಾರ್ಚ್ 31ರಂದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. 2010ರ ಜನವರಿ 1ರಿಂದ 2016ರ ಮಾರ್ಚ್ 16ರ ಅವಧಿಯಲ್ಲಿ ಆರೋಪಿಯು ₹ 39.65 ಲಕ್ಷಗಳಷ್ಟು ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದರು ಎಂಬ ಆರೋಪ ಎಫ್ಐಆರ್ನಲ್ಲಿತ್ತು.</p>.<p>ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದ ಸಿಬಿಐ, 2017ರ ಸೆಪ್ಟೆಂಬರ್ 27ರಂದು ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು. ಆರೋಪಿಯು ₹ 28.38 ಲಕ್ಷ ಮೌಲ್ಯದ (ಶೇ 61.94) ಅಕ್ರಮ ಆಸ್ತಿ ಹೊಂದಿರುವುದು ದೃಢಪಟ್ಟಿದೆ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು.</p>.<p>ವಿಚಾರಣೆ ಪೂರ್ಣಗೊಳಿಸಿ ಆದೇಶ ಪ್ರಕಟಿಸಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ವಿಶ್ವೇಶ್ವರ ಭಟ್ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂಬ ತೀರ್ಮಾನ ನೀಡಿದ್ದಾರೆ. ಅಪರಾಧಿಗೆ ಜೈಲು ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಿ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>