ಬೆಂಗಳೂರು: ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ತತ್ವಗಳು ಅಪಾಯದಲ್ಲಿವೆ ಎಂದು ಹೇಳಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ (1ನೇ ಪಡೆ, ಆಂತರಿಕ ಭಧ್ರತಾ ವಿಭಾಗ) ಅಸಿಸ್ಟೆಂಟ್ ಕಮಾಂಡೆಂಟ್ ಸುಹೇಲ್ ಅಹಮದ್ ಅವರು, ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ (ಆಡಳಿತ ವಿಭಾಗ) ಪತ್ರ ಬರೆದಿದ್ದಾರೆ.
‘ಸಂವಿಧಾನ ಕಾಯಕಲ್ಪ ಕಾರ್ಯಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ. ಸಂವಿಧಾನ ಕೊಡುಗೆಯಾಗಿ ನೀಡಿದ ಹುದ್ದೆಯನ್ನು ದೇಶಕ್ಕೆ ಸಂವಿಧಾನ ಸಮರ್ಪಣೆಯಾದ ಈ ಮಹತ್ವದ ದಿನದಂದು ಸಮರ್ಪಿಸಿ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ನವೆಂಬರ್ 26ರಂದು ಪತ್ರ ಬರೆದಿದ್ದಾರೆ. ಈ ಪತ್ರವು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.