ಬೆಂಗಳೂರು/ರಾಯಚೂರು: ಆಂಧ್ರಪ್ರದೇಶದ ಪೆನುಗೊಂಡ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಅಪಘಾತ ಸಂಭವಿ ಸಿದ್ದು, ರಾಜ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಪ್ರಕಾಶ್ ಪಾಟೀಲ ಎಂಬುವರು ದುರ್ಮರಣಕ್ಕೀಡಾಗಿದ್ದಾರೆ.
‘ಬೆಂಗಳೂರಿನಲ್ಲಿ ವಾಸವಿದ್ದ ಪ್ರಕಾಶ್, ಪತ್ನಿ ಶ್ರೀದೇವಿ ಹಾಗೂ ಮಗಳ ಜೊತೆಯಲ್ಲಿ ಕಾರಿನಲ್ಲಿ ಮಂತ್ರಾಲಯಕ್ಕೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಪತ್ನಿ ಹಾಗೂ ಮಗಳಿಗೂ ಗಾಯವಾಗಿದ್ದು, ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಪ್ರಕಾಶ್ ಸಾವಿಗೀಡಾಗಿದ್ದಾರೆ. ರಕ್ಷಣೆಗೆ ಬಂದಿದ್ದ ಸ್ಥಳೀಯರು ಪತ್ನಿ ಹಾಗೂ ಮಗಳನ್ನು ಆಂಬುಲೆನ್ಸ್ನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ. ಪೆನುಗೊಂಡ ಪೊಲೀಸರೇ ನಗರಕ್ಕೆ ಬಂದು, ಆಸ್ಪತ್ರೆಯಲ್ಲೇ ಗಾಯಾಳುಗಳ ಹೇಳಿಕೆ ದಾಖಲಿಸಿಕೊಂಡು ಹೋಗಿ ದ್ದಾರೆ’ ಎಂದೂ ಮೂಲಗಳು ತಿಳಿಸಿವೆ.
ಮೃತಪಟ್ಟ ಪ್ರಕಾಶ್, ಅಖಿಲ ಭಾರತ ಡಿಪ್ಲೊಮಾ ಇಂಜಿನಿಯರ್ಗಳ ಸಂಘದ ದಕ್ಷಿಣ ವಲಯದ ಕಾರ್ಯದರ್ಶಿಯೂ ಆಗಿದ್ದರು.