ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಮೇಲೆ ಹಲ್ಲೆ; ಮೆಟ್ರೊ ಕಾರ್ಮಿಕರ ವಿರುದ್ಧ ಕೇಸ್

Last Updated 6 ಮೇ 2020, 10:12 IST
ಅಕ್ಷರ ಗಾತ್ರ

ಬೆಂಗಳೂರು: ಬೊಮ್ಮನಹಳ್ಳಿ ಠಾಣೆ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ಮೆಟ್ರೊ ಕಾಮಗಾರಿ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಾಗಿದೆ.

‘ಹೊಸೂರು ಮುಖ್ಯರಸ್ತೆಯ ಯುಆರ್‌ಸಿ ಕನ್‌ಸ್ಟ್ರಕ್ಷನ್ ಘಟಕದ ಬಳಿ ಭಾನುವಾರ ರಾತ್ರಿ ಸೇರಿದ್ದ 40ಕ್ಕೂ ಹೆಚ್ಚು ಕಾರ್ಮಿಕರು, ತಮ್ಮನ್ನು ಸ್ವಂತ ಊರಿಗೆ ಕಳುಹಿಸಬೇಕೆಂದು ಪ್ರತಿಭಟನೆ ಮಾಡುತ್ತಿದ್ದರು. ಗಸ್ತಿನಲ್ಲಿದ್ದ ಕಾನ್‌ಸ್ಟೆಬಲ್ ಮಲ್ಲಪ್ಪ ಸ್ಥಳಕ್ಕೆ ಹೋಗಿದ್ದರು. ಅದೇ ವೇಳೆಯೇ ಕಾರ್ಮಿಕರು ಹಲ್ಲೆ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.

‘ಕಾನ್‌ಸ್ಟೆಬಲ್ ಠಾಣೆ ಹಾಗೂ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ ಹೆಚ್ಚಿನ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದರು. ಬಳಿಕವೇ ಪರಿಸ್ಥಿತಿ ತಿಳಿಗೊಂಡಿತ್ತು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT