<p><strong>ಬೆಂಗಳೂರು:</strong> ವಾಯು ವಿಹಾರ ಮಾಡುತ್ತಿದ್ದ ಟೆಕಿ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>ಸಾರಾಯಿ ಪಾಳ್ಯ ಸಾದಿಕ್ ಲೇಔಟ್ ನಿವಾಸಿಗಳಾದ ಮೊಹಮದ್ ಯಾಸರ್, ಸೈಯದ್ ಅಯಾನ್, ಅಬ್ಬಾಸ್ ಮತೀನ್ ಅಲಿಯಾಸ್ ಮೇಜರ್, ಕೆ.ಜಿ.ಹಳ್ಳಿ ಲಿಡ್ಕರ್ ಕಾಲೊನಿ ನಿವಾಸಿ ಮವೀನ್ ಕ್ರಿಸ್ಟೋಫರ್ ಅಲಿಯಾಸ್ ಸಿಬ್ಬಿ ಮತ್ತು ಡಿ.ಜಿ.ಹಳ್ಳಿ ನಿವಾಸಿ ಸಿದ್ದಿಕ್ ಖಾನ್ ಅವರನ್ನು ಬಂಧಿಸಿ ₹ 2 ಸಾವಿರ ನಗದು, ಕಾರು, ಚಾಕು ಜಪ್ತಿ ಮಾಡಲಾಗಿದೆ.</p>.<p>ಸಂಪಿಗೆಹಳ್ಳಿ ಬಳಿಯ ಎಂಸಿಇಸಿಎಚ್ಎಸ್ ಲೇಔಟ್ ನಿವಾಸಿ ಅಭಿಷೇಕ್ ಅವರು ನವೆಂಬರ್ 22ರಂದು ಮನೆಯ ಮುಂಭಾಗದ ರಸ್ತೆಯಲ್ಲಿ ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಾ ವಾಯುವಿಹಾರ ಮಾಡುತ್ತಿದ್ದರು. ಆಗ ಆರೋಪಿಗಳು ಕಾರಿನಲ್ಲಿ ಬಂದು ಅಭಿಷೇಕ್ ಅವರನ್ನು ಅಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್, ₹5 ಸಾವಿರ ದೋಚಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ಅಬ್ಬಾಸ್ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಯಾಗಿದ್ದು, ಆತನ ವಿರುದ್ಧ ಗೋವಿಂದಪುರ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಮೋಜು– ಮಸ್ತಿಗಾಗಿ ಹಣ ಸುಲಿಗೆ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಾಯು ವಿಹಾರ ಮಾಡುತ್ತಿದ್ದ ಟೆಕಿ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>ಸಾರಾಯಿ ಪಾಳ್ಯ ಸಾದಿಕ್ ಲೇಔಟ್ ನಿವಾಸಿಗಳಾದ ಮೊಹಮದ್ ಯಾಸರ್, ಸೈಯದ್ ಅಯಾನ್, ಅಬ್ಬಾಸ್ ಮತೀನ್ ಅಲಿಯಾಸ್ ಮೇಜರ್, ಕೆ.ಜಿ.ಹಳ್ಳಿ ಲಿಡ್ಕರ್ ಕಾಲೊನಿ ನಿವಾಸಿ ಮವೀನ್ ಕ್ರಿಸ್ಟೋಫರ್ ಅಲಿಯಾಸ್ ಸಿಬ್ಬಿ ಮತ್ತು ಡಿ.ಜಿ.ಹಳ್ಳಿ ನಿವಾಸಿ ಸಿದ್ದಿಕ್ ಖಾನ್ ಅವರನ್ನು ಬಂಧಿಸಿ ₹ 2 ಸಾವಿರ ನಗದು, ಕಾರು, ಚಾಕು ಜಪ್ತಿ ಮಾಡಲಾಗಿದೆ.</p>.<p>ಸಂಪಿಗೆಹಳ್ಳಿ ಬಳಿಯ ಎಂಸಿಇಸಿಎಚ್ಎಸ್ ಲೇಔಟ್ ನಿವಾಸಿ ಅಭಿಷೇಕ್ ಅವರು ನವೆಂಬರ್ 22ರಂದು ಮನೆಯ ಮುಂಭಾಗದ ರಸ್ತೆಯಲ್ಲಿ ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಾ ವಾಯುವಿಹಾರ ಮಾಡುತ್ತಿದ್ದರು. ಆಗ ಆರೋಪಿಗಳು ಕಾರಿನಲ್ಲಿ ಬಂದು ಅಭಿಷೇಕ್ ಅವರನ್ನು ಅಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್, ₹5 ಸಾವಿರ ದೋಚಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ಅಬ್ಬಾಸ್ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಯಾಗಿದ್ದು, ಆತನ ವಿರುದ್ಧ ಗೋವಿಂದಪುರ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಮೋಜು– ಮಸ್ತಿಗಾಗಿ ಹಣ ಸುಲಿಗೆ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>