ಚಿಕ್ಕಬಳ್ಳಾಪುರದ 26 ವರ್ಷದ ಯುವಕ ಇಲ್ಲಿನ ಕಂಪನಿಯೊಂದರಲ್ಲಿ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಏ.1ರಂದು ಮನೆಗೆ ಮರಳುವಾಗ ಉತ್ತರಹಳ್ಳಿ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಿ, ಹೆಚ್ಚಿನ ಚಿಕಿತ್ಸೆಗೆ ಆಸ್ಟರ್ಆರ್ವಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಯುವಕ ಚಿಕಿತ್ಸೆಗೆ ಸ್ಪಂದಿಸದ ಕಾರಣ ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿದ ವೈದ್ಯರು, ಕುಟುಂಬದ ಸದಸ್ಯರ ಅನುಮತಿಯೊಂದಿಗೆಅಂಗಾಂಗ ದಾನ ಪ್ರಕ್ರಿಯೆ ನಡೆಸಿದರು.