‘ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಸ್ವಚ್ಛತಾ ಕೆಲಸ ಮಾಡಲು ಪೌರ ಕಾರ್ಮಿಕರು ಹಾಜರಾಗಿದ್ದರು. ಕಸ ತುಂಬಿದ್ದ ವಾಹನವನ್ನು ಚಲಾಯಿಸಿಕೊಂಡು ಹೊರಟಿದ್ದ ಚಾಲಕರೊಬ್ಬರು, ರಸ್ತೆ ಬದಿಯಲ್ಲಿದ್ದ ಕಸ ತುಂಬಿಕೊಳ್ಳುವ ಸಲುವಾಗಿ ಸಂಚಾರ ಸಿಗ್ನಲ್ ಬಳಿ ವಾಹನ ನಿಲ್ಲಿಸಿದ್ದರು. ಸ್ಥಳಕ್ಕೆ ಬಂದು ಪ್ರಶ್ನಿಸಿದ್ದ ಪೊಲೀಸ್ ಕಾನ್ಸ್ಟೆಬಲೊಬ್ಬರು, ಚಾಲಕರ ಮೇಲೆಯೇ ಹಲ್ಲೆ ಮಾಡಿದ್ದಾರೆ’ ಎಂದು ಪ್ರತಿಭಟನಾನಿರತರು ದೂರಿದರು.