<p><strong>ಬೆಂಗಳೂರು:</strong> ಎಟಿಎಂಗೆ ಹಣ ತುಂಬುವ ವಾಹನದ ಚಾಲಕನೊಬ್ಬ ಲಕ್ಷಾಂತರ ಹಣ ಕದ್ದು ಪರಾರಿಯಾಗಿರುವ ಘಟನೆ ಸುಬ್ರಹ್ಮಣ್ಯ ನಗರ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.</p>.<p>ಪರಾರಿಯಾಗಿರುವ ಚಾಲಕ ದೊಡ್ಡಬಳ್ಳಾಪುರದ ಯೋಗೀಶ್ ಎನ್ನಲಾಗಿದೆ. ಎಟಿಎಂಗೆ ಹಣ ತುಂಬಿಸುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಏಜೆನ್ಸಿಯ ವಾಹನಕ್ಕೆ ಆರೋಪಿ ಚಾಲಕನಾಗಿದ್ದ.</p>.<p>ಅಧಿಕಾರಿಗಳು ಹಾಗೂ ಗನ್ಮ್ಯಾನ್ಸುಬ್ರಹ್ಮಣ್ಯನಗರದಲ್ಲಿದ್ದ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಮಂಗಳವಾರ ರಾತ್ರಿಹಣ ತುಂಬಿಸಲು ಹೋಗಿದ್ದರು.</p>.<p>ಈವೇಳೆ ವಾಹನದಲ್ಲಿದ್ದ ಹಣದ ಬ್ಯಾಗ್ನೊಂದಿಗೆ ಆರೋಪಿ ಪರಾರಿಯಾಗಿದ್ದಾನೆ.ಅಧಿಕಾರಿಗಳು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಕದ್ದೊಯ್ದಿರುವ ಬ್ಯಾಗ್ನಲ್ಲಿ ಅಂದಾಜು ₹65 ಲಕ್ಷ ಹಣ ಇತ್ತು ಎನ್ನಲಾಗಿದೆ.</p>.<p>‘ಕಳ್ಳತನಕ್ಕೆ ಮೊದಲೇ ಸಂಚು ರೂಪಿಸಿದ್ದ ಆರೋಪಿ, ತನ್ನ ಸುಳಿವು ಸಿಗಬಾರದೆಂದು ಸಿಸಿಟಿವಿ ಕ್ಯಾಮೆರಾ ಸಂಪರ್ಕಕಡಿತಗೊಳಿಸಿದ್ದಾನೆ. ಆರೋಪಿಗಾಗಿ ಶೋಧ ಮುಂದುವರಿದಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಟಿಎಂಗೆ ಹಣ ತುಂಬುವ ವಾಹನದ ಚಾಲಕನೊಬ್ಬ ಲಕ್ಷಾಂತರ ಹಣ ಕದ್ದು ಪರಾರಿಯಾಗಿರುವ ಘಟನೆ ಸುಬ್ರಹ್ಮಣ್ಯ ನಗರ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.</p>.<p>ಪರಾರಿಯಾಗಿರುವ ಚಾಲಕ ದೊಡ್ಡಬಳ್ಳಾಪುರದ ಯೋಗೀಶ್ ಎನ್ನಲಾಗಿದೆ. ಎಟಿಎಂಗೆ ಹಣ ತುಂಬಿಸುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಏಜೆನ್ಸಿಯ ವಾಹನಕ್ಕೆ ಆರೋಪಿ ಚಾಲಕನಾಗಿದ್ದ.</p>.<p>ಅಧಿಕಾರಿಗಳು ಹಾಗೂ ಗನ್ಮ್ಯಾನ್ಸುಬ್ರಹ್ಮಣ್ಯನಗರದಲ್ಲಿದ್ದ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಮಂಗಳವಾರ ರಾತ್ರಿಹಣ ತುಂಬಿಸಲು ಹೋಗಿದ್ದರು.</p>.<p>ಈವೇಳೆ ವಾಹನದಲ್ಲಿದ್ದ ಹಣದ ಬ್ಯಾಗ್ನೊಂದಿಗೆ ಆರೋಪಿ ಪರಾರಿಯಾಗಿದ್ದಾನೆ.ಅಧಿಕಾರಿಗಳು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಕದ್ದೊಯ್ದಿರುವ ಬ್ಯಾಗ್ನಲ್ಲಿ ಅಂದಾಜು ₹65 ಲಕ್ಷ ಹಣ ಇತ್ತು ಎನ್ನಲಾಗಿದೆ.</p>.<p>‘ಕಳ್ಳತನಕ್ಕೆ ಮೊದಲೇ ಸಂಚು ರೂಪಿಸಿದ್ದ ಆರೋಪಿ, ತನ್ನ ಸುಳಿವು ಸಿಗಬಾರದೆಂದು ಸಿಸಿಟಿವಿ ಕ್ಯಾಮೆರಾ ಸಂಪರ್ಕಕಡಿತಗೊಳಿಸಿದ್ದಾನೆ. ಆರೋಪಿಗಾಗಿ ಶೋಧ ಮುಂದುವರಿದಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>