‘ರಸ್ತೆ ಮಧ್ಯ ವಾಹನ ನಿಲ್ಲಿಸಿದ್ದ ಸಿಬ್ಬಂದಿ, ಮೂತ್ರ ವಿಸರ್ಜನೆಗೆ ಹೋಗಿದ್ದರು. ಅದೇ ವೇಳೆಯೇ ಸ್ಥಳಕ್ಕೆ ಬಂದಿದ್ದ ಆರೋಪಿಗಳು, ವಾಹನ ಹತ್ತಿ ಸ್ಟಾರ್ಟ್ ಮಾಡಿಕೊಂಡು ಅಲ್ಲಿಂದ ಪರಾರಿಯಾಗಿದ್ದರು. ಅದನ್ನು ಗಮನಿಸಿ ಸಿಬ್ಬಂದಿ, ಕೂಗಾಡುತ್ತಿದ್ದಂತೆ ಸಹಾಯಕ್ಕೆ ಬಂದ ಸ್ಥಳೀಯರ ಗುಂಪು ವಾಹನ ಬೆನ್ನಟ್ಟಿತ್ತು. ಅವರಿಗೆ ಸಿಕ್ಕಿ ಬೀಳುವ ಭಯದಲ್ಲೇ ಆರೋಪಿಗಳು, ವಾಹನವನ್ನು ದಾರಿ ಮಧ್ಯೆದಲ್ಲೇ ಬಿಟ್ಟು ಹೋಗಿದ್ದರು’ ಎಂದು ವಿವರಿಸಿದರು.