‘ಕೃತ್ಯದ ಬಳಿಕ ಐವರು ಆರೋಪಿಗಳ ಮೂವರು, ವಿಮಾನದಲ್ಲಿ ದೆಹಲಿಗೆ ಹೋಗಿದ್ದರು. ಇನ್ನಿಬ್ಬರು ಕಾರಿನಲ್ಲಿ ತಮ್ಮೂರಿಗೆ ತೆರಳಿದ್ದರು. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಹಾರು ಕಾರಿನ ನೋಂದಣಿ ಸಂಖ್ಯೆ ಆಧರಿಸಿ ಭರತ್ಪುರದಲ್ಲಿ ಆರೋಪಿಯೊಬ್ಬನನ್ನು ಸೆರೆ ಹಿಡಿಯಲಾಯಿತು. ನಂತರ ಉಳಿದವರೂ ಸಿಕ್ಕಿಬಿದ್ದರು. ರಾಜ್ಯದ ಹಲವೆಡೆ ಹಾಗೂ ಹೊರ ರಾಜ್ಯದಲ್ಲೂ ಆರೋಪಿಗಳು ಕೃತ್ಯ ಎಸಗಿರುವ ಮಾಹಿತಿ ಇದೆ’ ಎಂದೂ ತಿಳಿಸಿದರು.