<p><strong>ಬೆಂಗಳೂರು</strong>: ಎಟಿಎಂ ಯಂತ್ರವನ್ನು ಗ್ಯಾಸ್ ಕಟರ್ನಿಂದ ಕತ್ತರಿಸಿ ಹಣ ಕದ್ದೊಯ್ಯುತ್ತಿದ್ದ ಆರೋಪದಡಿ ಇಬ್ಬರನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ಉತ್ತರ ಭಾರತದ ರಾಜ್ಕುಮಾರ್ ಹಾಗೂ ಮರ್ಜಿತ್ ಸಿಂಗ್ ಬಂಧಿತರು. ನಗರದ ಎರಡು ಎಟಿಎಂ ಯಂತ್ರಗಳಲ್ಲಿದ್ದ ಹಣವನ್ನು ಆರೋಪಿಗಳು ಕದ್ದಿದ್ದರು. ಪ್ರಕರಣದ ತನಿಖೆ ಕೈಗೊಂಡು, ಇವರಿಬ್ಬರನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೋರಲಾಗುವುದು’ ಎಂದೂ ತಿಳಿಸಿವೆ.</p>.<p>‘ತಿಂಗಳಿಗೊಮ್ಮೆ ನಗರಕ್ಕೆ ಬರುತ್ತಿದ್ದ ಆರೋಪಿಗಳು, ಇಲ್ಲಿಯ ವಸತಿಗೃಹಗಳಲ್ಲಿ ವಾಸವಿರುತ್ತಿದ್ದರು. ಭದ್ರತಾ ಸಿಬ್ಬಂದಿ ಇರದ ಹಾಗೂ ಜನರ ಓಡಾಟ ಕಡಿಮೆ ಇರುವ ಎಟಿಎಂ ಘಟಕವನ್ನು ಗುರುತಿಸಿ ಕೃತ್ಯ ಎಸಗುತ್ತಿದ್ದರು.’</p>.<p>‘ಎಟಿಎಂ ಯಂತ್ರವನ್ನು ಗ್ಯಾಸ್ ಕಟರ್ನಿಂದ ಕತ್ತರಿಸುತ್ತಿದ್ದ ಆರೋಪಿಗಳು, ಅದರಲ್ಲಿದ್ದ ಹಣವನ್ನು ಕದ್ದುಕೊಂಡು ಪರಾರಿಯಾಗುತ್ತಿದ್ದರು. ಇತ್ತೀಚೆಗೆ ಉತ್ತರಹಳ್ಳಿ ಬಳಿಯ ಬ್ಯಾಂಕೊಂದರ ಎಟಿಎಂ ಯಂತ್ರದಿಂದ ₹ 17 ಲಕ್ಷವನ್ನು ಆರೋಪಿಗಳು ಕದ್ದಿದ್ದರೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಟಿಎಂ ಯಂತ್ರವನ್ನು ಗ್ಯಾಸ್ ಕಟರ್ನಿಂದ ಕತ್ತರಿಸಿ ಹಣ ಕದ್ದೊಯ್ಯುತ್ತಿದ್ದ ಆರೋಪದಡಿ ಇಬ್ಬರನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ಉತ್ತರ ಭಾರತದ ರಾಜ್ಕುಮಾರ್ ಹಾಗೂ ಮರ್ಜಿತ್ ಸಿಂಗ್ ಬಂಧಿತರು. ನಗರದ ಎರಡು ಎಟಿಎಂ ಯಂತ್ರಗಳಲ್ಲಿದ್ದ ಹಣವನ್ನು ಆರೋಪಿಗಳು ಕದ್ದಿದ್ದರು. ಪ್ರಕರಣದ ತನಿಖೆ ಕೈಗೊಂಡು, ಇವರಿಬ್ಬರನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೋರಲಾಗುವುದು’ ಎಂದೂ ತಿಳಿಸಿವೆ.</p>.<p>‘ತಿಂಗಳಿಗೊಮ್ಮೆ ನಗರಕ್ಕೆ ಬರುತ್ತಿದ್ದ ಆರೋಪಿಗಳು, ಇಲ್ಲಿಯ ವಸತಿಗೃಹಗಳಲ್ಲಿ ವಾಸವಿರುತ್ತಿದ್ದರು. ಭದ್ರತಾ ಸಿಬ್ಬಂದಿ ಇರದ ಹಾಗೂ ಜನರ ಓಡಾಟ ಕಡಿಮೆ ಇರುವ ಎಟಿಎಂ ಘಟಕವನ್ನು ಗುರುತಿಸಿ ಕೃತ್ಯ ಎಸಗುತ್ತಿದ್ದರು.’</p>.<p>‘ಎಟಿಎಂ ಯಂತ್ರವನ್ನು ಗ್ಯಾಸ್ ಕಟರ್ನಿಂದ ಕತ್ತರಿಸುತ್ತಿದ್ದ ಆರೋಪಿಗಳು, ಅದರಲ್ಲಿದ್ದ ಹಣವನ್ನು ಕದ್ದುಕೊಂಡು ಪರಾರಿಯಾಗುತ್ತಿದ್ದರು. ಇತ್ತೀಚೆಗೆ ಉತ್ತರಹಳ್ಳಿ ಬಳಿಯ ಬ್ಯಾಂಕೊಂದರ ಎಟಿಎಂ ಯಂತ್ರದಿಂದ ₹ 17 ಲಕ್ಷವನ್ನು ಆರೋಪಿಗಳು ಕದ್ದಿದ್ದರೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>