ಆ ವ್ಯಕ್ತಿ, ಎಟಿಎಂ ಕೇಂದ್ರದಲ್ಲಿ ವ್ಯವಹರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಇರುವುದರಿಂದ ಪಕ್ಕದಲ್ಲಿದ್ದ ಕರ್ನಾಟಕ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ಉಮಾದೇವಿ ಅವರನ್ನು ಕರೆದುಕೊಂಡು ಹೋಗಿದ್ದ. ಅಲ್ಲಿ ಎಟಿಎಂ ಕಾರ್ಡ್ ಪಡೆದುಕೊಂಡು, ಹಣ ತೆಗೆದುಕೊಡುವುದಾಗಿ ನಂಬಿಸಿ ಪಿನ್ ನಂಬರ್ ಪಡೆದುಕೊಂಡ ಆ ವ್ಯಕ್ತಿ, ಹಣ ತೆಗೆಯುವಂತೆ ನಟಿಸಿದ್ದ. ಆದರೆ, ಹಣದ ಬದಲು ಬ್ಯಾಲೆನ್ಸ್ ಸ್ಲಿಪ್ ಸಹಿತ ಎಸ್ಬಿಐ ಬ್ಯಾಂಕಿನ ಎಟಿಎಂ ಕಾರ್ಡ್ ಕೊಟ್ಟು, ‘ಹಣ ಬರಲಿದೆ. ಸ್ವಲ್ಪ ಕಾಯುವಂತೆ’ ಹೇಳಿ ಅಲ್ಲಿಂದ ಜಾಗ ಖಾಲಿ ಮಾಡಿದ್ದ.