ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ರಾಜ್ಯ ಘಟಕದ ಅಧ್ಯಕ್ಷ ಡಾ. ಸಿದ್ಧಪ್ಪ ಮಾಗರಿ, ‘ವೈದ್ಯಕೀಯ ವೃತ್ತಿ ನಡೆಸಲು ಅಗತ್ಯ ವಿದ್ಯಾರ್ಹತೆ ಪಡೆದು ರಾಜ್ಯದಾದ್ಯಂತ 40 ಸಾವಿರಕ್ಕೂ ಹೆಚ್ಚು ವೈದ್ಯರು ಕೆಲಸ ಮಾಡುತ್ತಿದ್ದಾರೆ. ನಮ್ಮ ಎಲ್ಲ ಕ್ಲಿನಿಕ್ಗಳು ಕೆಪಿಎಂಇ ಕಾಯ್ದೆಯಡಿ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ) ನೋಂದಣಿ ಮಾಡಿಕೊಂಡಿವೆ. ಆದರೂ, ಆರೋಗ್ಯ ಇಲಾಖೆ ಅಧಿಕಾರಿಗಳು ನಕಲಿ ವೈದ್ಯರು ಎಂದು ಕಿರುಕುಳ ನೀಡಿ, ನಮ್ಮ ಕ್ಲಿನಿಕ್ಗಳ ಮೇಲೆ ದಾಳಿ ಮಾಡುತ್ತಿದ್ದಾರೆ’ ಎಂದು ದೂರಿದರು.